ಬೆಂಗಳೂರು : ನಿರ್ದೇಶಕ ಅನೂಪ್ ಭಂಡಾರಿ ಮತ್ತು ಸುದೀಪ್ ಅಶ್ವತ್ಥಾಮ ಎಂಬ ಹೊಸ ಸಿನಿಮಾಗಾಗಿ ಮತ್ತೊಮ್ಮೆ ಜೊತೆಯಾಗುತ್ತಿದ್ದಾರೆ. ಅಶ್ವತ್ಥಾಮ ಒಂದು ಆಸಕ್ತಿದಾಯಕ ಕತೆಯಾಗಿದೆ. ಅನೂಪ್ ಭಂಡಾರಿ ಚಿತ್ರಕ್ಕಾಗಿ ಕಥೆ ಬರೆಯುತ್ತಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಸುದೀಪ ಹೇಳಿದ್ದರು.
“ಸುದೀಪ್ ಹೇಳಿದಂತೆ, ನಾನು ಸ್ಕ್ರಿಪ್ಟ್ ಬರೆಯುತ್ತಿದ್ದೇನೆ. ಕಥೆ ಪೂರ್ಣ ಸಿದ್ಧವಾದ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಸಿನಿಮಾ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.