ಇಂದಿನಿಂದ ಚಿತ್ರಮಂದಿರಗಳಲ್ಲಿ ಹೌಸ್‌ ಫುಲ್‌ ಪ್ರದರ್ಶನ

ಚಿತ್ರರಂಗದ ಹಿಡಿದಿದ್ದ ಕೋವಿಡ್ ಗ್ರಹಣ ಮುಕ್ತಾಯವಾಗಿದೆ. ಇಂದಿನಿಂದ ಹೌಸ್‌ ಫ‌ುಲ್‌ ಪ್ರದರ್ಶನ ಆರಂಭವಾಗಲಿದೆ. ಸ್ಯಾಂಡಲ್ ವುಡ್ ಅಂಗಳದಲ್ಲಿ ಮತ್ತೆ ಭರ್ಜರಿ ಸಂಭ್ರಮ, ಶಿಳ್ಳೆ ಮೊಳಗಲಿದೆ.

ಕೊರೋನಾ ಎರಡನೇ ಅಲೆಯ ಬಳಿಕ 5 ತಿಂಗಳ ನಂತರ 100% ಆಸನ ಭರ್ತಿಗೆ ಅವಕಾಶ ಸಿಕ್ಕಿದೆ. ಹೀಗಾಗಿ ಬೆಂಗಳೂರಿನ ಗಾಂಧಿನಗರದಲ್ಲಿ ಮತ್ತೆ ಹಬ್ಬದ ಸಡಗರ ಸಂಭ್ರಮ ಮನೆಮಾಡಿದೆ.

ಏಪ್ರಿಲ್ 1ರಂದು ತೆರೆಕಂಡಿದ್ದ ಪವರ್ ಸ್ಟಾರ್ ಪುನೀತ್ ನಟನೆ ಯುವರತ್ನ ಸಿನಿಮಾಗೆ, ಮೂರೇ ದಿನದಲ್ಲಿ ಶಾಕ್ ಕೊಟ್ಟಿತ್ತು ಸರ್ಕಾರ. ಅದಾದ ನಂತರ 5 ತಿಂಗಳ ಬಳಿಕ ಇಂದಿನಿಂದ ಮತ್ತೆ ಬೆಳ್ಳಿಪರದೆಗೆ ಹೊಸ ರಂಗು ಬರಲಿದೆ.

ಸಾಕಷ್ಟು ಸಿನೆಮಾಗಳು ಬಿಡುಗಡೆಗೆ ಸಾಲುಗಟ್ಟಿದೆ. ಹೊಸಬರು, ಸ್ಟಾರ್ ಗಳು ಸಿನಿಜಾತ್ರೆ ಮಾಡಲು ಸಿದ್ಧರಾಗಿದ್ದಾರೆ. ಇನ್ನೇನಿದ್ದರು ಪ್ರೇಕ್ಷಕರು ಬಿಡುವು ಮಾಡಿಕೊಂಡು ಸಿನೆಮಾ ನೋಡಿ ಸಂತೋಷ ಪಡುವುದೊಂದೇ ಬಾಕಿ ಇದೆ.

Sneha Gowda

Recent Posts

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

10 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

25 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

35 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

49 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

1 hour ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

1 hour ago