ಸಾಂಡಲ್ ವುಡ್

ಇಂದು ಕಿಚ್ಚನಿಗೆ 50ರ ಸಂಭ್ರಮ

ಬೆಂಗಳೂರು : ಇಂದು ಕಿಚ್ಚ ಸುದೀಪ್  ​ಅವರ 50ನೇ ಹುಟ್ಟುಹಬ್ಬ . ಆದರೆ, ಕೊರೋನಾ ಕಾರಣದಿಂದಾಗಿ ಅವರ ಬರ್ತ್​ ಡೇ ಅನ್ನು ಅಭಿಮಾನಿಗಳೊಂದಿಗೆಆಚರಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿಯೇ ಸುದೀಪ್ ಅವರು ಕೆಲವು ದಿನಗಳು ಮುಂಚಿತವಾಗಿಯೇ ಅಭಿಮಾನಿಗಳ ಬಳಿ ಕ್ಷಮೆ ಕೇಳುವುದರ ಜತೆಗೆ ನೀವು ಇರುವ ಸ್ಥಳದಿಂದಲೇ ಶುಭಕೋರಿ ಎಂದು ಮನವಿ ಮಾಡಿದ್ದರು. ಕಳೆದ ವರ್ಷವೂ ಕೊರೋನಾ ಕಾರಣದಿಂದಾಗಿ ಕಿಚ್ಚ ಅಭಿಮಾನಿಗಳನ್ನು ತಮ್ಮ ಹುಟ್ಟುಹಬ್ಬದಂದು ಭೇಟಿ ಮಾಡಿರಲಿಲ್ಲ. ಇದು ಈ ವರ್ಷವೂ ಮುಂದುವರೆದಿದೆ. ಕಿಚ್ಚನನ್ನು ನೇರವಾಗಿ ನೋಡಲು ಸಾಧ್ಯವಾಗದೇ ಹೋದರೇನಂತೆ, ಅದಕ್ಕೊಂದು ಪರ್ಯಾಯ ಮಾರ್ಗವನ್ನು ಸುದೀಪ್​ ಕಂಡುಕೊಂಡಿದ್ದಾರೆ.

ಕಿಚ್ಚ ಸುದೀಪ್​ ಅವರಿಗೆ ಅಭಿಮಾನಿಗಳು ನೇರವಾಗಿ ಹುಟ್ಟುಹಬ್ಬದ ಶುಭ ಕೋರಬಹುದಾಗಿದೆ.  ಆನ್​ಲೈನ್​ನಲ್ಲಿ ಅವರ ಹುಟ್ಟುಹಬ್ಬದ ವಿಶೇಷವಾಗಿ ಕಿಚ್ಚನ ಜೊತೆ ಒಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಫೇಸ್​ಬುಕ್​, ಇನ್​ಸ್ಟಾಗ್ರಾಂ ಹಾಗೂ ಟ್ವಿಟರ್​ನಲ್ಲಿ ಇಂದು ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ಮೂಲಕ ನೇರವಾಗಿ ಕಿಚ್ಚ ಸುದೀಪ್​ ಅವರಿಗೆ ವಿಶ್​ ಮಾಡಬಹುದಾಗಿದೆ. ಈ ಕಾರ್ಯಕ್ರಮಕ್ಕೆ ನಿಮ್ಮೊಂದಿಗೆ ನಾನು ಎಂದು ಹೆಸರಿಡಲಾಗಿದ್ದು, ಇದನ್ನು ನಟ ಹಾಗೂ ನಿರೂಪಕ ಅಕುಲ್ ಬಾಲಾಜಿ ನಡೆಸಿಕೊಡಲಿದ್ದಾರಂತೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago