ಬೆಂಗಳೂರು : ಚಿತ್ರೀಕರಣದಲ್ಲಿ ಫುಲ್ ಬ್ಯುಸಿ ಇರುವ ನಟ ಧನಂಜಯ್ ‘ಬಡವ ರಾಸ್ಕಲ್’ ಸಿನಿಮಾದ ‘ಉಡುಪಿ ಹೋಟೆಲು’ ಹಾಡು ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು ಒಂದೆಡೆಯಾದರೆ, ಮಾನ್ಸೂನ್ ರಾಗಾ ಮತ್ತು ರತ್ನನ್ ಪ್ರಪಂಚ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದರ ಸಂತಸ ಮತ್ತೊಂದೆಡೆ. ಅಲ್ಲದೆ ಸಾಲು ಸಾಲು ಸಿನಿಮಾ ಅವಕಾಶಗಳು ಧನಂಜಯ್ ಅವರನ್ನು ಆಗಸ್ಟ್ ತಿಂಗಳಲ್ಲಿ ಹುಡುಕಿಕೊಂಡು ಬಂದಿದ್ದೇ ಅವರು ಬ್ಯುಸಿಯಾಗಲು ಕಾರಣ. ಎಲ್ಲಕ್ಕಿಂತ ಹೆಚ್ಚಾಗಿ ಒಳ್ಳೊಳ್ಳೆ ಕಥೆಯುಳ್ಳ ಸಿನಿಮಾ ಅವಕಾಶಗಳು ಅವರನ್ನರಸಿ ಬಂದಿದ್ದು ಅವರ ಸಂತಸವನ್ನು ಇಮ್ಮಡಿಗೊಳಿಸಿದೆ.
ಕೊರೊನಾ ಸಾಂಕ್ರಾಮಿಕ ನಡುವೆ ಕೊರೊನಾ ಮಾರ್ಗಸೂಚಿಯ ನಿಯಮಾನುಸಾರ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವರ್ಷ ಅವರು ಸಿನಿಮಾ ಸೆಟ್ ನಲ್ಲಿಯೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು ಎನ್ನುವುದು ವಿಶೇಷ. ಸದ್ಯ ಧನಂಜಯ್ ಅವರು ನಿರ್ದೇಶಕ ವಿಜಯ್ ಮಿಲ್ಟನ್ ಅವರ ತಮಿಳು ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿ.
ಇವೆಲ್ಲದರ ನಡುವೆ ಅವರು ‘ಸಲಗ’ ಚಿತ್ರ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ.
ಕೆಲಸ ಕಾರ್ಯಗಳ ನಡುವೆ ಮಾತಿಗೆ ಸಿಕ್ಕ ಅವರು ತಮ್ಮ ಕಾರ್ಯ ವೈಖರಿಯ ಝಲಕ್ ಅನ್ನು ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಕೆಲಸದ ಬಗ್ಗೆ ಅವರು ಹೇಳಿದ್ದಿಷ್ಟು. ‘ಏನೂ ಮಾಡದೆ ಸುಮ್ಮನೆಯೇ ಕುಳಿತುಕೊಳ್ಳುವುದು ಒಳ್ಳೆಯದಲ್ಲ. ಅದರಲ್ಲೂ ಒಳ್ಳೊಳ್ಳೆ ಅವಕಾಶಗಳು ಎದುರಾದಾಗಲಂತೂ ಸುಮ್ಮನೆ ಕೂರಬಾರದು. ಯಾವುದೇ ಉದ್ಯೋಗ ಕ್ಷೇತ್ರವಾಗಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು. ನಾನಂತೂ ನನ್ನ ಹಾದಿಯಲ್ಲಿ ಬಂದ ಒಳ್ಳೆ ಅವಕಾಶಗಳನ್ನು ಮಿಸ್ ಮಾಡಿಕೊಂಡಿಲ್ಲ. ಬಾಚಿ ತಬ್ಬಿಕೊಂಡಿದ್ದೇನೆ.’ ಎಂದವರು ಹೇಳಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…