ಹರಳು ಮಾಫಿಯಾದ ಅಪರೂಪದ ಕಥಾವಸ್ತು ಇರುವ ‘ಮೇಲೊಬ್ಬ ಮಾಯಾವಿ’ ಸಿನಿಮಾ ಎಪ್ರಿಲ್ 29ರಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಸಂಚಾರಿ ವಿಜಯ್ ‘ಇರುವೆ’ ಎಂಬ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದ ಪುಷ್ಪಗಿರಿ ಅಭಯಾರಣ್ಯ ಭಾಗದಲ್ಲಿ ನಡೆಯುತ್ತಿರುವ ಹರಳು ಕಲ್ಲು ದಂಧೆಯ ಕರಾಳಮುಖವನ್ನು ತಮ್ಮ ಪಾತ್ರದ ಮೂಲಕ ಅವರು ಬಿಚ್ಚಿಡಲಿದ್ದಾರೆ.
ರಂಗಭೂಮಿ ಪ್ರತಿಭೆ ಅನನ್ಯ ಶೆಟ್ಟಿ ನಾಯಕಿಯಾಗಿ ನಟಿಸಿದ್ದು, ‘ಸಕ್ಕರೆ’ ಎಂಬ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಮೊಟ್ಟ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಖಳನಟನಾಗಿ ಕಾಣಿಕೊಳ್ಳುತ್ತಿದ್ದಾರೆ. ಕಿರುತೆರೆ ನಟಿ ಪವಿತ್ರಾ ಜಯರಾಮ್- ಚಕ್ರವರ್ತಿ ಚಂದ್ರಚೂಡ್ ಅವರ ಕಾಂಬೀನೇಶನ್ ಸ್ಟಿಲ್ಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.
ಚಿತ್ರದಲ್ಲಿ ಕೃಷ್ಣಮೂರ್ತಿ ಕವತ್ತಾರ್, ಬೆನಕ ನಂಜಪ್ಪ, ಎಮ್.ಕೆ.ಮಠ, ನವೀನ್ಕುಮಾರ್, ಲಕ್ಷ್ಮಿ ಅರ್ಪಣ್, ಮುಖೇಶ್ ಹಾಗೂ ಡಾ.ಮನೋನ್ಮಣಿ ಹೀಗೆ ಸಾಕಷ್ಟು ರಂಗಭೂಮಿ ಪ್ರತಿಭೆಗಳನ್ನು ಚಿತ್ರದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಕಾಣಬಹುದು. ಬಿ.ನವೀನ್ ಕೃಷ್ಣ ನಿರ್ದೇಶನ ಮಾಡಿರೋ ‘ಮೇಲೊಬ್ಬ ಮಾಯಾವಿ’ ಸಿನಿಮಾವನ್ನು ‘ಶ್ರೀ ಕಟೀಲ್ ಸಿನಿಮಾಸ್’ ಬ್ಯಾನರ್ನ ಅಡಿ ಭರತ್ ಕುಮಾರ್ ಮತ್ತು ತನ್ವಿ ಅಮಿನ್ ಕೊಲ್ಯ ನಿರ್ಮಾಣ ಮಾಡಿದ್ದಾರೆ.