News Karnataka Kannada
Monday, April 29 2024
ಸಾಂಡಲ್ ವುಡ್

ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನಕ್ಕೆ ಅವಕಾಶ

Punith
Photo Credit :

ಬೆಂಗಳೂರು : ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.

ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. ಭಾರಿ ಸಂಖ್ಯೆಯ ಪೊಲೀಸರನ್ನು ನಿವಾಸದ ಸುತ್ತ ನಿಯೋಜಿಸಲಾಗಿದೆ.

ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಪುನೀತ್ ಅವರ ನಿವಾಸದ ಬಳಿ ಯಾರೂ ತೆರಳದಂತೆ ಸರಕಾರ ಮನವಿ ಮಾಡಿದ್ದು, ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗ ಬೇಡಿ. ಶಾಂತ ರೀತಿಯಲ್ಲಿ ಇರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು