News Karnataka Kannada
Saturday, May 04 2024
ಸಾಂಡಲ್ ವುಡ್

ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್​ ಕೌಶಿಕ್ ಬಂಧನ

Aravind
Photo Credit :

ಬೆಂಗಳೂರು: ಧಾರಾವಾಹಿ ನಿರ್ಮಾಪಕನಿಂದ ಹಣಪಡೆದ ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್​ ಕೌಶಿಕ್​ರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅರವಿಂದ್​ ಕೌಶಿಕ್​ ಅವರು ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ್ದಾರೆ. ನಮ್ ಏರಿಯಾದಲ್ಲಿ ಒಂದಿನ,‌ ಹುಲಿರಾಯ ಹಾಗೂ ಶಾರ್ದೂಲ ಹೆಸರಿನಿ ಸಿನಿಮಾಗಳನ್ನು ಕೌಶಿಕ್​ ನಿರ್ದೇಶನ ಮಾಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಮೂಡಿಬಂದ ಕಮಲಿ ಧಾರವಾಹಿಯನ್ನು ಕೂಡ ನಿರ್ದೇಶನ ಮಾಡಿದ್ದಾರೆ.

ಆರೋಪ ಏನೆಂದರೆ, ಕಮಲಿ ಧಾರವಾಹಿ ನಿರ್ಮಾಣ ಮಾಡಲಿಕ್ಕೆ ನಿರ್ಮಾಪಕ ರೋಹಿತ್​ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರಂತೆ. 2018 ರಲ್ಲಿ ಕಮಲಿ ಸೀರಿಯಲ್ ನಿರ್ಮಾಣಕ್ಕೆ ರೋಹಿತ್​ ಹಣ ಹೂಡಿಕೆ ಮಾಡಿದ್ದರಂತೆ. ಆದರೆ. ಧಾರವಾಹಿ ತೆರೆಕಂಡ ನಂತರ ಹಣ ಹಿಂತಿರುಗಿಸದೇ, ಲಾಭಾಂಶವನ್ನೂ ನೀಡದೇ ವಂಚನೆ ಮಾಡಿದ್ದಾರೆ ಎಂದು ಕೌಶಿಕ್​ ವಿರುದ್ಧ ರೋಹಿತ್​ ಆರೋಪ ಮಾಡಿದ್ದಾರೆ.

ಈ ಸಂಬಂಧ ನಿರ್ಮಾಪಕ ರೋಹಿತ್ ವೈಯ್ಯಾಲಿಕಾವಲ್ ಠಾಣೆಗೆ ದೂರು ನೀಡಿದ್ದಾರೆ. ಅರವಿಂದ್ ಕೌಶಿಕ್ ವಿರುದ್ಧ 420 ಸೆಕ್ಷನ್​ ಅಡಿ ಪ್ರಕರಣ ದಾಖಲಾಗಿದ್ದು, ಸದ್ಯ ವೈಯ್ಯಾಲಿಕಾವಲ್ ಪೊಲೀಸರು ಅರವಿಂದ್ ಕೌಶಿಕ್​ರನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು