ಬೆಂಗಳೂರು : ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ಅವರು ಸೋಮವಾರ ಸಂಜೆ 7:30ಕ್ಕೆ ನಿಧನರಾದರು.
ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು.
ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ, ಪ್ರೊಫೆಸರ್ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ. ರಂಗಭೂಮಿಯಲ್ಲಿ ‘ಮೇಕಪ್ ನಾಣಿ’ ಎಂದೇ ಹೆಸರಾಗಿದ್ದ ಬೆಳವಾಡಿ ನಂಜುಡಯ್ಯ ನಾರಾಯಣ ಅವರು ಭಾರ್ಗವಿ ಅವರ ಪತಿ. ದಂಪತಿಗೆ ನಟರಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ ಸೇರಿ ನಾಲ್ವರು ಮಕ್ಕಳು.
ಭಾರ್ಗವಿ ಅವರು ಬಿಎಸ್ಸಿ ಮತ್ತು ಇಂಗ್ಲಿಷ್ ಎಂಎ ಸ್ನಾತಕೋತ್ತರ ಪದವಿ ಪಡೆದಿದ್ದರು. ಅವರು ‘ನಾ ಕಂಡ ನಮ್ಮವರು’ ಕೃತಿ ರಚಿಸಿದ್ದರು.
ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಸಜೀವ ದಹನಹೊಂದಿರುವ ಘಟನೆ ಘಟನೆ…
ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಗೆ ಈ ಬಾರಿ ಕರಾವಳಿ ಜಿಲ್ಲೆೆಯನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು…
ತಾಪಮಾನ ಏರಿಕೆ, ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು…
ಕೋಲಿಹಾನ್ನ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ಗಣಿಯಲ್ಲಿ ಲಿಫ್ಟ್ ಹಗ್ಗ ಮುರಿದು ಗಣಿಯೊಳಗೆ ಸಿಲುಕಿಗೊಂಡಿದ್ದ 14 ಜನರನ್ನು ರಕ್ಷಿಸಲಾಗಿದೆ. ಮಂಗಳವಾರ ತಡರಾತ್ರಿ…
ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…