ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ಅವರು ಗುರುವಾರ ಸಂಜೆ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.
ಮಾಗಡಿ ರಸ್ತೆಯಲ್ಲಿ ವಾಸವಾಗಿದ್ದ ಉದಯ್ ಹುತ್ತಿನಗದ್ದೆ ಅವರು, ರಾಜಾಜಿನಗರದ ಬಾಷ್ಯಂ ಸರ್ಕಲ್ನಲ್ಲಿ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದರು.ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
1987ರಲ್ಲಿ ಆರಂಭ ಸಿನಿಮಾದಲ್ಲಿ ನಾಯಕ ನಟನಾಗಿ ಮಿಂಚಿದ್ದ ಉದಯ್ ಹುತ್ತಿನಗದ್ದೆ ಅವರು, ಜಯಭೇರಿ, ಅಮೃತ ಬಿಂದು, ಕರ್ಮ, ಉಂಡುಹೋದ ಕೊಂಡಹೋದ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು.