ಕನ್ನಡ ನಟ ಧನ್ವೀರ್ ವಿರುದ್ಧ ದೂರು ದಾಖಲು

ಬೆಂಗಳೂರಿನ ಎಸ್‌.ಸಿ. ರಸ್ತೆಯ ಅನುಪಮಾ ಥಿಯೇಟರ್ ಬಳಿ ಗುರುವಾರ (ಫೆಬ್ರವರಿ 17) ತಡರಾತ್ರಿ ಘಟನೆ ನಡೆದಿದೆ. ನಟ ಧನ್ವೀರ್ ವಿರುದ್ಧ ಚಂದ್ರಶೇಖರ್ ಎಂಬ ಯುವಕ ಥಳಿಸಿರುವ ಆರೋಪ ಮಾಡಿದ್ದಾರೆ.

ನಟ ಧನ್ವೀರ್ ಅವರಿಗೆ ಸಿಹಿ ಹಾಗೂ ಕಹಿ ಘಟನೆ ಒಂದೇ ದಿನ ನಡೆದಿದೆ. ಅವರ ನಟನೆಯ ‘ಬೈ ಟೂ ಲವ್​’ ಸಿನಿಮಾ ಇಂದು (ಫೆಬ್ರವರಿ 18) ತೆರೆಗೆ ಬಂದಿದೆ. ಇದರ ಜತೆಗೆ ಅವರ ವಿರುದ್ಧ ದೂರು ಕೂಡ ದಾಖಲಾಗಿದೆ. ಬೌನ್ಸರ್​ ಜತೆ ಸೇರಿ ಅಭಿಮಾನಿ ಮೇಲೆ ಹಲ್ಲೆ ಮಾಡಿದ ಆರೋಪ ಧನ್ವೀರ್ ವಿರುದ್ಧ ಕೇಳಿ ಬಂದಿದೆ. ಹಲ್ಲೆಗೆ ಒಳಗಾದ ಅಭಿಮಾನಿ ದೂರು ದಾಖಲು ಮಾಡಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಘಟನೆ ಬಗ್ಗೆ ಧನ್ವೀರ್ ಅವರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.

ಬೆಂಗಳೂರಿನ ಎಸ್‌.ಸಿ. ರಸ್ತೆಯ ಅನುಪಮಾ ಥಿಯೇಟರ್ ಬಳಿ ಗುರುವಾರ (ಫೆಬ್ರವರಿ 17) ತಡರಾತ್ರಿ ಘಟನೆ ನಡೆದಿದೆ. ನಟ ಧನ್ವೀರ್ ವಿರುದ್ಧ ಚಂದ್ರಶೇಖರ್ ಎಂಬ ಯುವಕ ಥಳಿಸಿರುವ ಆರೋಪ ಮಾಡಿದ್ದಾರೆ. ಸ್ನೇಹಿತನ ಜೊತೆ ಊಟ ಮುಗಿಸಿ ಚಂದ್ರಶೇಖರ್ ಮನೆಗೆ ತೆರಳುತ್ತಿದ್ದರು. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಕಂಡಾಗ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ಮುಂದಾಗುತ್ತಾರೆ. ಅದೇ ರೀತಿ ಧನ್ವೀರ್ ಕಂಡಾಗ ಫೋಟೋ ತೆಗೆಸಿಕೊಳ್ಳೋಕೆ ಚಂದ್ರಶೇಖರ್ ಮುಂದಾಗಿದ್ದಾರೆ. ಅಭಿಮಾನಿಯ ಬೇಡಿಕೆಗೆ ಧನ್ವೀರ್ ಸ್ಪಂದಿಸಲಿಲ್ಲ.

ಇದು ಚಂದ್ರಶೇಖರ್​ಗೆ ಬೇಸರ ತರಿಸಿದೆ. ಆಗ ಚಂದ್ರಶೇಖರ್​ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಧನ್ವೀರ್ ಹಲ್ಲೆ ಮಾಡಿದ್ದಾರೆ ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ. ಈ ವೇಳೆ ಧನ್ವೀರ್​ ಜತೆ ಬೌನ್ಸರ್ಸ್ ಕೂಡ ಸೇರಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಚಂದ್ರಶೇಖರ್ ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದಾರೆ. ಚಂದ್ರಶೇಖರ್ ದೇಹಕ್ಕೆ ಗಾಯಗಳಾಗಿವೆ.

ನಟ ಧನ್ವೀರ್ ಮತ್ತು ಶ್ರೀಲೀಲಾ ‘ಬೈ ಟೂ ಲವ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಪ್ರೀತಿ-ಪ್ರೇಮದ ಕಥೆ ಸಿನಿಮಾದ ಹೈಲೈಟ್​ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ‘ಬಜಾರ್​’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟವರು ಧನ್ವೀರ್. ‘ಕಿಸ್​’ ಚಿತ್ರದ ಮೂಲಕ ಶ್ರೀಲೀಲಾ ಬೇಡಿಕೆ ಹೆಚ್ಚಿಸಿಕೊಂಡರು. ಇಬ್ಬರೂ ‘ಬೈ ಟೂ ಲವ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಹರಿ ಸಂತೋಷ್​ ನಿರ್ದೇಶನವಿದೆ. ಸಾಧು ಕೋಕಿಲ, ರಂಗಾಯಣ ರಘು, ಅಚ್ಯುತ್​ ಕುಮಾರ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Gayathri SG

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

10 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

30 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

55 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago