ಸ್ಯಾಂಡಲ್ವುಡ್: ಮಹಾರಾಷ್ಟ್ರದಲ್ಲಿ ಕರ್ನಾಟಕದ ಧ್ವಜ ಸುಟ್ಟು ಹಾಕಿದ ಘಟನೆ ಬಗ್ಗೆ ನಟ ಧ್ರುವ ಸರ್ಜಾ ಕೂಡ ತಮ್ಮ ಧ್ವನಿ ಎತ್ತಿದ್ದಾರೆ. ಆ ಬಗ್ಗೆ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಖಾರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.ರಚಿತಾ ರಾಮ್ ಮತ್ತು ಅಜಯ್ ರಾವ್ ನಟನೆಯ ಲವ್ ಯೂ ರಚ್ಚು ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು.
ಈ ವೇಳೆ ಕರುನಾಡಿನ ಧ್ವಜದ ಬಗ್ಗೆ ಅವರು ಮಾತನಾಡಿದರು.ಕರ್ನಾಟಕದ ಬಾವುಟಕ್ಕೆ ಎಲ್ಲರೂ ಮರ್ಯಾದೆ ಕೊಡಲೇಬೇಕು. ಮರ್ಯಾದೆ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತಿಲ್ಲ. ಅದು ಮನಸ್ಸಿನಲ್ಲೇ ಇರುತ್ತದೆ. ನಾವು ನಿಮಗೆ ಯಾವ ರೀತಿ ಮರ್ಯಾದೆ ಕೊಡುತ್ತೇವೋ ಅದೇ ರೀತಿ ನೀವು ನಮ್ಮ ಧ್ವಜವನ್ನು ಗೌರವಿಸಬೇಕು ಎಂದಿದ್ದಾರೆ. ಶಿವರಾಜ್ಕುಮಾರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದಾರೆ. ಅದೇ ರೀತಿ ಜಗ್ಗೇಶ್, ಸಂತೋಷ್, ಆನಂದ್ರಾಮ್ ಸೇರಿದಂತೆ ಕನ್ನಡದ ಅನೇಕ ಸೆಲೆಬ್ರಿಟಿಗಳು ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ.
ಸೋಶಿಯಲ್ ಮೀಡಿಯಾ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಟ್ಯಾಗ್ಮಾ ಡಿ ಟ್ವೀಟ್ ಮಾಡಲಾಗುತ್ತಿದೆ.