News Karnataka Kannada
Saturday, April 27 2024
ಸಾಂಡಲ್ ವುಡ್

‘ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಕಿರುಹೊತ್ತಿಗೆ ಬಿಡುಗಡೆ

New Project 2021 09 15t211224.496
Photo Credit :
ಬೆಂಗಳೂರು: ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು ‘ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ. ಸದರಿ ಕೃತಿಯನ್ನು ಕನಿಷ್ಠ ಒಂದು ಲಕ್ಷ ಮಕ್ಕಳಿಗೆ ವಿತರಿಸುವ ಗುರಿಯನ್ನು ಹೊಂದಿದೆ.

ಶರಣು ಹುಲ್ಲೂರ್ ಅವರು ಬರೆದ ಕರುನಾಡ ಯಜಮಾನ ಡಾ.ವಿಷ್ಣುವರ್ಧನ ಎಂಬ ಕೃತಿಯನ್ನು ಸಚಿವರು ತಮ್ಮ ಕಚೇರಿಯಲ್ಲಿ ಇಂದು ಬಿಡುಗಡೆಗೊಳಿಸಿದರು.

ಸಿನಿಮಾ, ಜನಪರ ಕಾರ್ಯಗಳ ಮೂಲಕ ಡಾ.ವಿಷ್ಣುವರ್ಧನ್ ಅವರು ಯಾವತ್ತಿಗೂ ನಮ್ಮೊಂದಿಗೆ ಇರುತ್ತಾರೆ. ಅವರ ಆದರ್ಶ ಬದುಕು, ನಾಡು, ನುಡಿಯ ಬಗೆಗಿನ ಅಭಿಮಾನ ಮತ್ತು ಜೀವಪರ ಕಾಳಜಿ ನಮಗೆಲ್ಲ ಮಾದರಿಯಾಗಿದೆ. ಅವರು ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿದರೂ, ಕೊನೆಗೂ ಗೆದ್ದದ್ದು ಅವರ ಶ್ರಮ. ಹಾಗಾಗಿ ಮಕ್ಕಳಿಗೆ ಡಾ.ವಿಷ್ಣು ಬದುಕಿನ ಕುರಿತು ಪರಿಚಯ ಆಗಬೇಕಿದೆ. ಆ ಕಾರಣದಿಂದ ಡಾ.ವಿಷ್ಣು ಅವರ ಬದುಕು ಸಾಧನೆಗಳನ್ನು ಪಠ್ಯದಲ್ಲಿ ಸೇರಿಸಲು ಡಾ.ವಿಷ್ಣು ಸೇನಾ ಸಮಿತಿ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು “ಪಠ್ಯಪುಸ್ತಕ ಸಮಿತಿ” ಗೆ ನಿಮ್ಮ ಮನವಿಯನ್ನು ಶಿಫಾರಸ್ಸುಗೊಳಿಸುವುದಾಗಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು