News Karnataka Kannada
Sunday, April 28 2024
ಸಾಂಡಲ್ ವುಡ್

‘ಕುಂತೀಪುತ್ರ’ ಚಿತ್ರೀಕರಣ ಸಂಪೂರ್ಣ

New Project 2021 09 15t185304.967
Photo Credit :

ಬೆಂಗಳೂರು: ಕಲಬುರಗಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ‘ಕುಂತಿ ಪುತ್ರ’ ಚಿತ್ರದ ಚಿತ್ರೀಕರಣ ಪೂರ್ತಿಗೊಂಡಿದೆ. ಇತ್ತೀಚಿಗಷ್ಟೆ ಚಿತ್ರದ ಮೇಕಿಂಗ್ ದೃಶ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ‘ಕುಂತಿ ಪುತ್ರ’ ಚಿತ್ರಕ್ಕೆ ರಾಜು ಬೋನಗಾಣಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ತೆಲುಗಿನ ಹಲವಾರು ಚಲನಚಿತ್ರಗಳಿಗೆ ಕೆಲಸ ಮಾಡಿದ ನಿರ್ದೇಶಕ-ನಿರ್ಮಾಪಕರು ಸೇರಿಕೊಂಡು ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿರುವುದು ವಿಶೇಷ.

ರಾಜು ಅವರ ಪ್ರಯತ್ನಕ್ಕೆ ಪೂರಕವಾಗಿ ಶಶಾಂಕ್ ಗೌಡ ಮತ್ತು ದೇವೇಂದ್ರಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕನ್ನಡದಲ್ಲಿ ಮೊದಲು ಚಿತ್ರವನ್ನು ಬಿಡುಗಡೆ ಮಾಡಿ ಆನಂತರ ತೆಲುಗಿಗೆ ಡಬ್ ಮಾಡುವ ಯೋಜನೆಯನ್ನೂ ಚಿತ್ರತಂಡ ಹೊಂದಿದೆ. 90ರ ದಶಕದಲ್ಲಿ ನಡೆದ ಘಟನೆ ಆಧರಿಸಿ ಚಿತ್ರ ಮಾಡಲಾಗಿದೆ‌. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

ಚಿತ್ರದ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ನಿರ್ದೇಶಕ ರಾಜು ಬೋನಗಾನಿ, ತೆಲುಗಿನಲ್ಲಿ ಹಲವು ವರ್ಷಗಳ ಕಾಲ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದು, ಇದೇ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದೇನೆ ಎಂದರು. ನಾಯಕ ಗೋಪಿಕೃಷ್ಣ, ಹಳ್ಳಿ ಸೊಗಡಿನ ಕಥೆಯಲ್ಲಿ ಸ್ನೇಹ-ಪ್ರೀತಿ ಸೇರಿದಂತೆ ಎಲ್ಲವೂ ಚಿತ್ರದಲ್ಲಿ ಅಡಕವಾಗಿದೆ. ಪಾಂಡವಪುರ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಜೊತೆಗೆ ನೈಜತೆಗೆ ಒತ್ತು ನೀಡಲಾಗಿದೆ. ಈ ಹಿಂದೆ ಅವರು ಮೂರು ಚಿತ್ರಗಳಲ್ಲಿ ನಟಿಸಿದ್ದು ಅದರಲ್ಲಿ ಒಂದು ಚಿತ್ರ ಬಿಡುಗಡೆಯಾಗಿದೆ ಎಂದು ಹೇಳಿದರು.

ಚಿತ್ರದಲ್ಲಿ ಪ್ರಿಯಾಂಕಾ ಚೌಧರಿ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಆರತಿ ರಾಜ್. ವಿಜಯಪ್ರಕಾಶ್ ಸೇರಿದಂತೆ ಹಲವು ಮಂದಿ ನಟಿಸಿದ್ದಾರೆ. ದಿಲೀಪ್ ಭಂಡಾರಿ ಅವರ ಸಂಗೀತ ಮತ್ತು ಈಶ್ವರ್ ಅವರು ಛಾಯಾಗ್ರಹಣ ಹೊಣೆ ಹೊತ್ತುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು