ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆ.ಜಿ.ಎಫ್ -1” ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷಗಳನ್ನು ಪೂರೈಸಿದೆ. ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್ವುಡ್ನತ್ತ ತಿರುಗಿ ನೋಡುವಂತೆ ಮಾಡಿದ “ಕೆ.ಜಿ.ಎಫ್ -1” ಬಿಡುಗಡೆಯಾಗಿ 3 ವರ್ಷಗಳೇ ಕಳೆದರೂ ಈ ಚಿತ್ರದ ಕ್ರೇಜ್ ಮಾತ್ರ ಇನೂ ಕಡಿಮೆಯಾಗಿಲ್ಲ.
ನಾನು ಬರೋವರೆಗೂ ಬೇರೆಯವರ ಹವಾ. ಬಂದ್ಮೇಲೆ ನಂದೇ ಹವಾ.. ಎಂದು ರಾಕಿ ಭಾಯ್ ಹೇಳಿದ ಡೈಲಾಗ್ ಒಂದು ಟ್ರೆಂಡ್ ಹುಟ್ಟು ಹಾಕಿತ್ತು. ಸ್ಯಾಂಡಲ್ವುಡ್ ಸ್ಟಾರ್ ಆಗಿದ ಯಶ್ ಪ್ಯಾನ್ ಇಂಡಿಯನ್ ಸ್ಟಾರ್ ಆದರು. ಸ್ಯಾಂಡಲ್ವುಡ್ನ ಹಳೆ ದಾಖಲೆಗಳನ್ನೆಲ್ಲ ಪುಡಿ ಪುಡಿ ಮಾಡಿ “ಕೆ.ಜಿ.ಎಫ್ -1” ಚಿತ್ರ ಹೊಸ ದಾಖಲೆಯನ್ನು ಸೃಷ್ಟಿ ಮಾಡಿತ್ತು. ಕನ್ನಡ ಚಿತ್ರರಂಗದ ಪವರ್ ಎಂತಹದು ಅನ್ನೊದನ್ನ ಅಂತ “ಕೆ.ಜಿ.ಎಫ್ -1” ಚಿತ್ರ ತೋರಿಸಿಕೊಟ್ಟಿತ್ತು.
“ಕೆ.ಜಿ.ಎಫ್ -1” ಸಕ್ಸಸ್ ಬಳಿಕ ಇದೀಗ ಇಡೀ ಭಾರತೀಯ ಚಿತ್ರರಂಗವೇ ‘ಕೆ.ಜಿ.ಎಫ್ -2’ ಚಿತ್ರಕ್ಕಾಗಿ ಕಾತುರದಿಂದ ಕಾದು ಕುಳಿತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಕೆ.ಜಿ.ಎಫ್-2 ಚಿತ್ರದ ಟೀಸರ್ ಹೊಸ ದಾಖಲೆಯನ್ನು ಸೃಷ್ಟಿ ಮಾಡಿತ್ತು. ಅದರಂತೇ ಪ್ರೇಕ್ಷಕರು ‘ಕೆ.ಜಿ.ಎಫ್ -2’ ಚಿತ್ರದ ಮೇಲೆ ಬಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಮುಂದಿನ ವರ್ಷ ಏಪ್ರೀಲ್ 14 ರಂದು ‘ಕೆ.ಜಿ.ಎಫ್ -2’ ಚಿತ್ರ ವಲ್ಡ್ವೈಡ್ ರಿಲೀಸ್ ಆಗುತ್ತಿದ್ದು ಮತ್ತೊಮೆ ಯಾವ ಹೊಸ ದಾಖಲೆಯನ್ನು ಸೃಷ್ಟಿ ಮಾಡುತ್ತೆ ಅನ್ನೊದನ್ನ ಕಾದು ನೋಡಬೇಕು.
ಇನ್ನು ಈ ಬಗ್ಗೆ ಹೊಂಬಾಳೆ ಫಿಲಂಸ್ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಕೆ.ಜಿ.ಎಫ್ ಚಿತ್ರದ ಸವಿ ನೆನಪಿನ ಕೆಲವು ಮೇಕೆಂಗ್ ತುಣುಕುಗಳನ್ನು ಹಂಚಿಕೊಂಡಿದ್ದಾರೆ. ಮುಂದಿನ ವರ್ಷ ಏಪ್ರೀಲ್ 14 ರಂದು ‘ಕೆ.ಜಿ.ಎಫ್ -2’ ಚಿತ್ರ ವಲ್ಡ್ವೈಡ್ ರಿಲೀಸ್ ಆಗುತ್ತಿದ್ದು ಮತ್ತೊಮೆ ಯಾವ ಹೊಸ ದಾಖಲೆಯನ್ನು ಸೃಷ್ಟಿ ಮಾಡುತ್ತೆ ಅನ್ನೊದನ್ನ ಕಾದು ನೋಡಬೇಕು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…