ಕಂಟ್ರಿಮೇಡ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೀಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ಧವಾಗಿದೆ. ಇಂದು ಮಹೂರ್ತ ಭಾಗ್ಯ ಕೂಡ ದೊರೆತಿದೆ. ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಾಲಯದಲ್ಲಿ ಅದ್ದೂರಿಯಾಗಿ ಜರುಗಿದ ಈ ಸಮಾರಂಭಕ್ಕೆ ದುನಿಯಾವಿಜಯ್ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ, ವಸಿಷ್ಠಸಿಂಹ ಕ್ಯಾಮಾರ ಆನ್ ಮಾಡಿ ತಂಡಕ್ಕೆ ಶುಭ ಹಾರೈಸಿದರು.
ಈ ಸಿನಿಮಾ ಮಾಸ್ ಗ್ಯಾಂಗ್ ಸ್ಟಾರ್ ಕುರಿತಾಗಿದೆ. ಬಾಲಕನಾಗಿದ್ದಾಗ ಕೆಲವು ಕಹಿ ಘಟನೆಗಳು ನಡೆಯುತ್ತವೆ. ಅದನ್ನ ಸಹಿಸಿಕೊಳ್ಳಲಾಗದೆ ಊರು ಬಿಟ್ಟು ಕಲ್ಕತ್ತಾ ಸಿಟಿ ಸೇರಿಕೊಳ್ಳುವ ನಾಯಕನ ಸುತ್ತ ಕಥೆ ಹೆಣೆಯಲಾಗಿದೆ. ’ಲವ್ ಮಾಕ್ಟೇಲ್’ ತೆಲುಗು ಚಿತ್ರ ’ಗುರುತಿಂದ ಶೀತಕಾಯಿ’ ನಿರ್ಮಾಣ ಮಾಡಿರುವ ಕನ್ನಡತಿ ಭಾವನಾರವಿ ಗೊಂಬೆ ಪಿಕ್ಚರ್ಸ್ ಮೂಲಕ ಬಂಡವಾಳ ಹೂಡುತ್ತಿದ್ದಾರೆ. ಮೆಕಾನಿಕಲ್ ಇಂಜಿನಿಯರಿಂಗ್ ಮುಗಿಸಿರುವ ದಾವಣಗೆರೆಯ ರಾಘವಸೂರ್ಯ ಇದಕ್ಕೂ ಮುಂಚೆ ತೆಲುಗು ಮತ್ತು ಕನ್ನಡ ಚಿತ್ರಗಳಿಗೆ ಕೆಲಸ ಮಾಡಿದ ಅನುಭವ ಹೊಂದಿದ್ದು, ಇದರ ಪರಿಣಾಮ ಸಿನಿಮಾಕ್ಕೆ ರಚನೆ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.
ಕಲ್ಕತ್ತಾದಲ್ಲಿ ಶೇಕಡ 30, ಉಳಿದ ಭಾಗದ ಚಿತ್ರೀಕರಣವನ್ನು ರಾಯಚೂರು, ತಿಂತಣಿ ಹಾಗೂ ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಿಸಲು ಚಿತ್ರತಂಡ ಫ್ಲ್ಯಾನ್ ಮಾಡಿದೆ. ಸಿನಿಮಾದಲ್ಲಿ ಐದು ಹಾಡುಗಳಿರಲಿದ್ದು, ನಕುಲ್ ಅಭಯಂಕರ್ ಸಂಗೀತ ನೀಡಲಿದ್ದಾರೆ. ಛಾಯಾಗ್ರಹಣ ಜಿ.ಎಸ್.ಶ್ರೇಯಸ್,
ಸಂಕಲನ ದೀಪು.ಎಸ್.ಕುಮಾರ್ ಚಿತ್ರಕ್ಕಿದೆ.
ಈಗಾಗಲೇ ಗಂಟು ಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ನಿಶ್ಚಿತ್ ಕೊರೋಡಿ ನಾಯಕನಾಗಿ ಎರಡು ಶೇಡ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿಯಾಗಿ ’ಲವ್ಮಾಕ್ಟೆಲ್-2’ ಖ್ಯಾತಿಯ ರಚೇಲ್ ಡೇವಿಡ್ ನಟಿಸಿದ್ದಾರೆ. ಉಳಿದಂತೆ, ಶರತ್ ಲೋಹಿತಾಶ್ವ,
ತಬಲಾನಾಣಿ ಮುಂತಾದವರು ತಾರಬಳಗದಲ್ಲಿದ್ದಾರೆ. ಏಪ್ರಿಲ್ ತಿಂಗಳಿಂದ ಕಂಟ್ರಿಮೇಡ್ ಶೂಟಿಂಗ್ ಶುರುವಾಗಲಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.