ಸಾಂಡಲ್ ವುಡ್ : ಗಣೇಶ ಚತುರ್ಥಿಯಂದು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡುವುದಾಗಿ ಹೇಳಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 55ನೇ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಬಹುನಿರೀಕ್ಷಿತ ಡಿ55ಗೆ ‘ಕ್ರಾಂತಿ” ಎಂದು ಟೈಟಲ್ ಇಡಲಾಗಿದ್ದು, ಗಣೇಶ ಚತುರ್ಥಿ ದಿನ ದರ್ಶನ್ ಅಭಿಮಾನಿಗಳ ಮನದಲ್ಲಿ ಸಂಭ್ರಮ ಮನೆ ಮಾಡಿದೆ. ಸದ್ಯ ಸಿನಿಮಾದ ಪೋಸ್ಟರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿದೆ.
ನಟ ದರ್ಶನ್ ಈ ಪೋಸ್ಟರ್ ಅನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ನಮ್ಮ ಮುಂದಿನ ಚಿತ್ರಕ್ಕೆ ‘ಕ್ರಾಂತಿ’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
ವಿ.ಹರಿಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಮೀಡಿಯಾ ಹೌಸ್ ಸ್ಟುಡಿಯೋದಡಿ ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದ ಹೊರೆ ಹೊತ್ತಿದ್ದಾರೆ. ವಿ.ಹರಿಕೃಷ್ಣ ಅವರು ದರ್ಶನ್ ಅವರ 55ನೇ ಚಿತ್ರವನ್ನು ಪೂರ್ಣ ಪ್ರಮಾಣದಲ್ಲಿ ನಿರ್ದೇಶಿಸಲಿದ್ದಾರೆ.