ಜೂ. 3ಕ್ಕೆ ತೆರೆಗೆ ಬರಲಿದೆ ‘ಗಜಾನನ ಆ್ಯಂಡ್ ಗ್ಯಾಂಗ್’

ಬೆಂಗಳೂರು : ಕಳೆದ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ಕನ್ನಡ ಸಿನಿಮಾ ‘ ಗಜಾನನ ಆ್ಯಂಡ್ ಗ್ಯಾಂಗ್ ‘ ಮುಂಬರುವ ಜೂನ್ 3 ರಂದು ತೆರೆಗೆ ಬರಲು ರೆಡಿಯಾಗಿದೆ . ಒಂದು ಕಾಲೇಜು ಕಥೆ ಆಧಾರಿತ ಚಿತ್ರ ಇದಾಗಿದ್ದು , ನಟ ಶ್ರೀ ಮಹದೇವ್ ಮತ್ತು ನಟಿ ಅದಿತಿ ಪ್ರಭುದೇವ ಅವರು ನಾಯಕ – ನಾಯಕಿಯಾಗಿ ಮಿಂಚಲಿದ್ದಾರೆ . ಇನ್ನು , ‘ ನಮ್ ಗಣಿ ಬಿ . ಕಾಂ ಪಾಸ್ ‘ ಖ್ಯಾತಿಯ ಅಭಿಷೇಕ್ ಶೆಟ್ಟಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ . ಅಂದಹಾಗೆ , ದೇಶಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ , ಜನವರಿಯಿಂದ ಸಿನಿಮಾ ಹಾಲ್‌ಗಳು 50 ಪ್ರತಿಶತ ಆಕ್ಯುಪೆನ್ಸಿ ದರದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದ್ದರಿಂದ , ಬಿಡುಗಡೆಯ ದಿನಾಂಕವನ್ನು ತಳ್ಳಲು ನಿರ್ಧರಿಸಿದ ನಿರ್ಮಾಪಕರು ಮತ್ತು ಚಿತ್ರತಂಡ , ಈಗ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ .

ಹಾಗಾಗಿ , ಜೂನ್ 3 ರಂದು 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ . ಈ ಚಿತ್ರದಲ್ಲಿ ಶ್ರೀ ಮಹಾದೇವ್ ಅವರು ಮೊದಲ ಬಾರಿಗೆ ನಟಿ ಅದಿತಿ ಪ್ರಭುದೇವ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ . ಇನ್ನು , ಕಳೆದ ಡಿಸೆಂಬರ್‌ನಲ್ಲಿ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಈ ಚಿತ್ರದ ಟ್ರೈಲರ್ ಸಿನಿಪ್ರಿಯರ ಕುತೂಹಲವನ್ನು ಗಳಿಸಿತ್ತು . ನಟಿ ಮೇಘನಾ ರಾಜ್ ಅವರು ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದರು . ಈ ಸಿನಿಮಾಗೆ ಪ್ರದ್ದ್ಯೋತ್ತನ್ ಅವರು ಸಂಗೀತ ನಿರ್ದೇಶನ ಮಾಡಿದ್ದು , ಲೀಲಾ ಅವರ ಛಾಯಾಗ್ರಹಣವಿದೆ . ಹಾಗೆಯೇ , ವಿಜೆಟ್ ಚಂದ್ರು ಅವರು ಸಂಕಲನ ಮತ್ತು ಥ್ರಿಲ್ಲರ್ ಮಂಜು ಅವರು ಫೈಟ್ ಮಾಸ್ಟರ್ ಆಗಿದ್ದಾರೆ .

Gayathri SG

Recent Posts

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ…

3 mins ago

ಬೃಹತ್ ಗಾತ್ರದ ಮರ ಬಿದ್ದು ಹೊಸ ಕಾರು ಜಖಂ

ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್​ನಲ್ಲಿ ನಡೆದಿದೆ.

22 mins ago

ಈ ನಾಯಕನ ರಾಸಲೀಲೆಗೆ ವರ್ಷಕ್ಕೆ 25 ಹುಡುಗಿಯರು ಬೇಕಂತೆ!

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ತನ್ನ ವಿಚಿತ್ರ ನಿರ್ಧಾರಗಳಿಂದಲೇ ಸುದ್ದಿಯಾದವರು.ಸದ್ಯ ಇವರ ಮೇಲೆ ಯೆನ್ಮಿ ಪಾರ್ಕ್…

32 mins ago

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ…

41 mins ago

ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌…

53 mins ago

ಆಕ್ಸಿಜನ್ ಕೊರತೆ ದುರಂತಕ್ಕೆ 3 ವರ್ಷ : ಸಂತ್ರಸ್ಥರಿಗೆ ಸಿಗದ ನ್ಯಾಯ

ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2ರ ರಾತ್ರಿ ಆಮ್ಲಜನಕ ಸಕಾಲದಲ್ಲಿ ಪೂರೈಕೆಯಾಗದೆ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ…

1 hour ago