ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಹೆಸರಾಂತ ನಿರ್ದೇಶಕ ನಾಗಾಭರಣರ ಪುತ್ರ ಪನ್ನಗ ಭರಣ ನಿರ್ದೇಶದನಲ್ಲಿಯೇ ಈ ಚಿತ್ರ ಬರ್ತಿದೆ. ಇಲ್ಲಿಯ ಹೆಸರಾಂತ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿಯೇ ಈ ಚಿತ್ರದ ಸ್ಕ್ರಿಪ್ಟ್ ಪೂಜೆ ಕೂಡ ಈಗ ನೆರವೇರಿದೆ.
ಪ್ರಜ್ವಲ್ ದೇವರಾಜ್ ಗೆ ಮೊಟ್ಟ ಮೊದಲ ಬಾರಿಗೆ ನಿರ್ದೇಶಕ ಪನ್ನಗ ಭರಣ ಡೈರೆಕ್ಷನ್ ಮಾಡುತ್ತಿದ್ದಾರೆ. ಹಿಂದಿ ಚಿತ್ರರಂಗದ ಅಧಿರ್ ಭಟ್ ಬರೆದಿರೋ ಕಮರ್ಷಿಯಲ್ ಕಥೆಯನ್ನೇ ಪನ್ನಗ ಭರಣ ನಿರ್ದೇಶನ ಮಾಡುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನದ ಮಾಡುತ್ತಿದ್ದಾರೆ. ವಿರಾಜ್ ಸಿಂಗ್ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಪ್ರವೀಣ್ ಯಾದವ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಇತರ ತಾರಾಬಳಗದ ಡಿಟೈಲ್ಸ್ ರಿವೀಲ್ ಆಗುತ್ತದೆ.