News Karnataka Kannada
Sunday, April 28 2024
ಸಾಂಡಲ್ ವುಡ್

ತೋತಾಪುರಿ ತೆರೆಗೆ ಬರಲು ಸಿದ್ದ ಎಂದ ಜಗ್ಗೇಶ್‌

Jaggesh Totapuri 15 7 21
Photo Credit :

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ ಅವರ ಬಹುನಿರೀಕ್ಷಿತ ಸಿನಿಮಾ ತೋತಾಪುರಿ ತೆರೆಮೇಲೆ ಬರಲು ಸಿದ್ಧವಾಗಿದೆ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಲಾಕ್‍ಡೌನ್ ತೆರವುಗೊಂಡ ನಂತರ ಅಂದರೆ ಈಗ ಈ ಸಿನಿಮಾದ ಡಬ್ಬಿಂಗ್ ಮತ್ತೆ ಆರಂಭವಾಗಿದೆ. ತೋತಾಪುರಿ ಸಿನಿಮಾ ಅತಿಶೀಘ್ರದಲ್ಲಿ ನಿಮ್ಮ ಮುಂದೆ ಬರಲು ಸಿದ್ಧತೆ ನಡೆದಿದೆ. ನೀರ್ ದೋಸೆ ನಿರ್ದೇಶಕ ವಿಜಯ್ ಜೊತೆ ಎರಡನೇ ಚಿತ್ರಪಯಣ ನಗುವಿನ ರಸದೌತಣ ಎಂದು ಜಗ್ಗೇಶ್ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಚಿತ್ರದ ಚಿತ್ರೀಕರಣದ ಕೆಲವು ಫೋಟೋಗಳನ್ನು ನೋಡುತ್ತಿದ್ದರೆ ತೋತಾಪುರಿ ಅಂತರ್ ಧರ್ಮೀಯ ಪ್ರೇಮ ಕತೆ ಇರಬಹುದಾ ಎಂಬ ಅನುಮಾನ ಮೂಡಿಸುತ್ತದೆ. ಯಾಕೆಂದರೆ, ನಾಯಕ ಜಗ್ಗೇಶ್ ಹಣೆಗೆ ಕುಂಕುಮ ಇಟ್ಟುಕೊಂಡಿದ್ದರೆ, ನಾಯಕಿ ಅದಿತಿ ಬುರ್ಖಾ ಧರಿಸಿ ಮುಸ್ಲಿಂ ಹುಡುಗಿಯಾಗಿ ಹಾಗೂ ಸುಮನ್ ರಂಗನಾಥ್ ಕ್ರೈಸ್ತ ಸಿಸ್ಟರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರ ತೆರೆಯ ಮೇಲೆ ಬಂದರೆ ಚಿತ್ರದ ಕಥಾಹಂದರವೇನು ಎಂಬುದನ್ನು ತಿಳಿಯ ಬಹುದಾಗಿದೆ.
ನೀರ್ ದೋಸೆ ಚಿತ್ರದ ಬಳಿಕ ನಿರ್ದೇಶಕ ವಿಜಯ ಪ್ರಸಾದ್ ತೋತಾಪುರಿ ಸಿನಿಮಾ ಮೂಲಕವಾಗಿ ಮತ್ತೊಮ್ಮೆ ನವರಸನಾಯಕನಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಧನಂಜಯ್, ಅಧಿತಿ ಪ್ರಭುದೇವ, ಸುಮನ್ ರಂಗನಾಥ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾ ಇನ್ನೇನು ತೆರೆಗಪ್ಪಳಿಸಲಿದೆ. ಈ ಕುರಿತಾಗಿಯೇ ಸಿಹಿ ಸುದ್ದಿ ಕೊಟ್ಟಿದ್ದಾರೆ ನವರಸ ನಾಯಕ ಜಗ್ಗೇಶ್ ನೀಡಿದ್ದಾರೆ.
ವಿಶೇಷ ಅಂದರೆ ಡಾಲಿ ಧನಂಜಯ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ವಿಜಯ ಪ್ರಸಾದ್ ನಿರ್ದೇಶಿಸಿದ್ದ ಸಿದ್ಲಿಂಗು ಹಾಗೂ ನೀರ್ ದೋಸೆ ಚಿತ್ರಗಳನ್ನು ನೋಡಿ ಇಷ್ಟಪಟ್ಟಿದ್ದ ಧನಂಜಯ, ನವರಸ ನಾಯಕ ಜಗ್ಗೇಶ್ ಅವರ ಜತೆ ನಟಿಸುವ ಅವಕಾಶ ಸಿಕ್ಕಿದ್ದೇ ಸಂಭ್ರಮಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು