News Karnataka Kannada
Sunday, April 28 2024
ಸಾಂಡಲ್ ವುಡ್

ನಟ ದುನಿಯಾ ವಿಜಿ ತಾಯಿ ನಿಧನ

Duniya Viji Mother 8 7 21
Photo Credit :

ಬೆಂಗಳೂರು : ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಗುರುವಾರ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾಗಿ ಕಳೆದ 23 ದಿನಗಳಿಂದ ಅವರು ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೆ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿ ಅನ್ನೋ ಸುದ್ದಿ ಲಭ್ಯವಾಗಿತ್ತು. ನಿತ್ಯ ವೈದ್ಯರು ಮನೆಗೆ ಬಂದು ವಿಜಯ್​ ಅವರ ತಾಯಿಯ ಆರೋಗ್ಯ ವಿಚಾರಿಸಿ ಅಗತ್ಯ ಚಿಕಿತ್ಸೆ ನೀಡುತ್ತಿದ್ದರಂತೆ. ಚಿಕಿತ್ಸೆ ಕೊಡಿಸುತ್ತಿದ್ದರೂ ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿತ್ತು ಎಂದು ತಿಳಿದು ಬಂದಿದೆ. ಅಮ್ಮನ ಆರೋಗ್ಯದ ಬಗ್ಗೆ ಪ್ರತಿಕ್ರಿಯಸಿದ್ದ ದುನಿಯಾ ವಿಜಯ್​ ಅವರು, ತಾಯಿಗೆ ಬ್ರೇನ್ ಸ್ಟ್ರೋಕ್​ ಆಗಿದ್ದು, ಅವರ ಆರೋಗ್ಯ ಹದಗೆಟ್ಟಿದೆ. ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿಲ್ಲ ಎಂದು ಮಾಹಿತಿ ನೀಡಿದ್ದರು.
ಕೆಲ ದಿನಗಳ ಹಿಂದಷ್ಟೇ ದುನಿಯಾ ವಿಜಯ್ ಅವರ ತಂದೆ ಹಾಗೂ ತಾಯಿಗೆ ಕೊರೋನಾ ಸೋಂಕಾಗಿತ್ತು. ಆಗಲೂ ಸಹ ಅವರಿಗೆ ಮನೆಯಲ್ಲೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಇಬ್ಬರೂ ಸಹ ಕೋವಿಡ್​ನಿಂದ ಚೇತರಿಸಿಕೊಂಡಿದ್ದರು. ಈ ವಿಷಯವನ್ನು ದುನಿಯಾ ವಿಜಯ್ ಅವರು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದರು. ಇದಾದ ನಂತರ ಇನ್ನೇನು ಎಲ್ಲ ಸರಿ ಹೋಯಿತು ಎನ್ನುವಾಗಲೇ ಅವರ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಅಮ್ಮನಿಗೆ ಬ್ರೇನ್ ಸ್ಟ್ರೋಕ್​ ಆಗಿರುವ ಕಾರಣದಿಂದ ಸ್ಥಿತಿ ಗಂಭಿರವಾಗಿತ್ತು. ಈಗ ತಾಯಿ ಕೊನೆಯುಸಿರೆಳೆದಿರುವ ಬಗ್ಗೆ ಫೇಸ್​ಬುಕ್​ನಲ್ಲಿ ವಿಜಯ್​ ಒಂದು ಫೋಟೋ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಅಮ್ಮ ಮತ್ತೆ ಹುಟ್ಟಿ ಬಾ ಎಂದು ಭಾವುಕರಾಗಿ ಪೋಸ್ಟ್​ ಮಾಡಿದ್ದಾರೆ.
ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಆನೇಕಲ್​ನ ಕುಂಬಾರ ಹಳ್ಳಿಯಲ್ಲಿ ಮಾಡಲಾಗುತ್ತೆ. ಅಮ್ಮ-ಅಮ್ಮ ಕೊರೋನಾ ಸೋಂಕಿನಿಂದ ಗುಣಮುಖರಾದ ನಂತರ ವಿವರವಾಗಿ ಆ ಬಗ್ಗೆ ಬರೆದುಕೊಂಡಿದ್ದ ದುನಿಯಾ ವಿಜಯ್​ಅಪ್ಪ-ಅಮ್ಮನಿಗೆ ಕೊರೋನಾ ಸೋಂಕಾದಾಗ ಮನೆಯಲ್ಲಿ ಚಿಕಿತ್ಸೆ ಕೊಡಿಸುತ್ತಲೇ ಆಸ್ಪತ್ರೆಗಳಲ್ಲಿ ಬೆಡ್​ಗಾಗಿ ಹುಡುಕಾಟ ಮುಂದರೆಸಿದ್ದರಂತೆ. ಮನೆಯಲ್ಲಿದ್ದ ಉಳಿದವರು ಸಹ ಆಗಾಗ ಸ್ಯಾನಿಟೈಸ್ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿರುವವ ಕೋಣೆಗೆ ಹೋಗಿ ಬಂದ ಕೂಡಲೇ ಸ್ನಾನ ಮಾಡುವುದು ಹಾಗೂ ಅವರ ಕೋಣೆಗೆ ಹೋಗುವಾಗ ಮಾಸ್ಕ್​ ಹಾಗೂ ಗ್ಲೌಸ್ ಧರಿಸುವ ಮೂಲಕ ಕೋವಿಡ್​ ನಿಯಮಗಳನ್ನು ಪಾಲಿಸುತ್ತಿದ್ದಂತೆ. ಇದರಿಂದಾಗಿ ಯಾರಿಗೂ ಯಾವುದೇ ಸಮಸ್ಯೆಯಾಗಲಿಲ್ಲ ಎಂದು ವಿಜಯ್ ಅವರು ಹೇಗಿಲ್ಲ ಮನೆಯಲ್ಲೇ ಅಪ್ಪ-ಅಮ್ಮನ ಚಿಕಿತ್ಸೆಗೆ ತಯಾರಿ ನಡೆಸಿದರು ಎಂದು ತಮ್ಮ ಫೇಸ್​ಬುಕ್​ನಲ್ಲಿ ವಿವರವಾಗಿ ಬರೆದುಕೊಂಡಿದ್ದರು.
ಮನೆಯಲ್ಲೇ ಚಿಕಿತ್ಸೆ ಕೊಡಿಸಲು ನಿರ್ಧರಿಸಿದ ಮರುದಿನ ಬೆಳಗ್ಗೆ 9:00ಕ್ಕೆ ಒಂದು ಆಟೋದಲ್ಲಿ ಆಕ್ಸಿಜನ್, ಮೆಡಿಸಿನ್ ಜತೆ ಈಶ್ವರ್ ಎಂಬ ಆರೋಗ್ಯ ಶುಶ್ರೂಷಕ ಬಂದು ಇಳಿದರು. ನಾನು ನನ್ನ ಮಗ ಮತ್ತು ಕೀರ್ತಿ ಮೂರು ಜನ ನಮ್ಮ ತಂದೆ ತಾಯಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಕ್ರೂರಿ ಕೊರೋನಾ ಜೊತೆ ಸೆಣೆಸಾಡಲು ನಿಂತೆವು. ಮಾನಸಿಕವಾಗಿ ನಾನು ನಂಬಿದ ಗುರುಗಳು ನನ್ನ ಜತೆಯಲ್ಲಿದ್ದರೆ, ದೈಹಿಕವಾಗಿ ನಮ್ಮ ಜೊತೆ ಆರೋಗ್ಯ ಶುಶ್ರೂಷಕ ಈಶ್ವರ್ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಅರ್ಧಗಂಟೆ ಬಂದು ಹೋಗುತ್ತಿದ್ದರು. ನಮ್ಮ ತಂದೆ ಈಗಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಈ ಕೊರೋನಾ ಅವರನ್ನು ತುಂಬಾ ಬಳಲುವಂತೆ ಮಾಡಿತು. ನಮ್ಮ ತಾಯಿ ಎರಡು ಮೂರು ದಿನದಲ್ಲಿ ಚಿಕಿತ್ಸೆಗೆ ಸ್ಪಂದಿಸಲು ಪ್ರಾರಂಭಿಸಿದರು. ಈ ನಡುವೆ ಪ್ರತಿ ದಿನ ವಿಡಿಯೋ ಕಾಲ್ ಮೂಲಕ ವೈದ್ಯರು ಚಿಕಿತ್ಸೆಯನ್ನು ಹೇಳುತ್ತಿದ್ದರು ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅದರ ಜತೆಗೆ ಪ್ರತಿ ದಿನ ಬರುತ್ತಿದ್ದ ಈಶ್ವರ ನಮ್ಮಗಳ ಪಾಲಿಗೆ ನಿಜವಾದ ಈಶ್ವರನೆ ಆದ ಎಂದು ಸಹಾಯ ಮಾಡಿದ್ದನ್ನು ನೆನಪಿಸಿಕೊಂಡಿದ್ದರು.
ನಮ್ಮ ತಂದೆಯ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸಲು ಪ್ರಾರಂಭಿಸಿತು. ಯಾವ ಮಟ್ಟಿಗೆ ಎಂದರೆ ನನ್ನ ಆತ್ಮೀಯರು ಫೋನ್ ಮಾಡಿದಾಗ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಏನು ಎಂಬ ಅನುಮಾನ ಕಾಡುತ್ತಿದೆ ಎಂದು ಸ್ವತಃ ನಾನೇ ಹೇಳಿದ್ದುಂಟು. ಆ ಕಾರಣಕ್ಕೆ ಅವರ ಜತೆ ಕಳೆಯುತ್ತಿರುವ ಕೊನೆಯ ಕ್ಷಣಗಳು ನೆನಪಿನಲ್ಲಿ ಉಳಿಯಲಿ ಎಂಬ ಉದ್ದೇಶದಿಂದ ವಿಡಿಯೋ ಮಾಡಲು ಪ್ರಾರಂಭಿಸಿದೆವು. ಇದರ ಮಧ್ಯೆ ನಾನು ಭರವಸೆಯನ್ನು ಮಾತ್ರ ಕಳೆದುಕೊಂಡಿರಲಿಲ್ಲ. ಮೊದಲು ನನ್ನ ತಾಯಿ ಚೇತರಿಸಿಕೊಂಡು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾದರು. ‘ ನೀನು ಹೆದರಬೇಡ. ಚೇತರಿಸಿಕೊಂಡ ನಂತರ ನನ್ನಮ್ಮ ನನ್ನನ್ನು ಕರೆದು ‘ ನಮಗೆ ಯಾರಿಗೂ ಸಿಗದ ಯೋಗ ನಿನಗೆ ಸಿಕ್ಕಿದೆ. ನಿನ್ನನ್ನು ಪ್ರೀತಿಸುವವರು ಇರುವವರೆಗೂ, ಅವರ ಆಶೀರ್ವಾದ, ಆರೈಕೆ ನಿನ್ನನ್ನು ಕಾಯುತ್ತದೆ’ ಎಂದು ಹೇಳಿದರು. ನಿಜವಾಗಲೂ ನಮ್ಮ ತಾಯಿ ಹೇಳಿದಂತೆ ಆಯಿತು. ನಿಮ್ಮಗಳ ಆಶೀರ್ವಾದ ಮತ್ತು ದೈವ ಬಲದಿಂದ ನಮ್ಮ ಮನೆಯಲ್ಲಿ ಚಮತ್ಕಾರ ನಡೆಯಿತು. ತಂದೆಯೂ ಗುಣಮುಖರಾದರು ಎಂದು ತಮ್ಮ ಅನುಭವವನ್ನು ವಿಜಯ್​ ಹಂಚಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು