News Karnataka Kannada
Wednesday, May 01 2024
ಸಾಂಡಲ್ ವುಡ್

ನನಗೆ ನೀಡಿದ್ದ ಗನ್​ಮ್ಯಾನ್​ ಹಿಂಪಡೆಯಲಾಗಿದೆ ನಟ ಚೇತನ್​ ಅಸಮಾಧಾನ

Actor, social activist Chetan arrested for tweeting against Hindutva
Photo Credit : News Kannada

ವಿವಾದಾತ್ಮಕ ಟ್ವೀಟ್​ ಹಿನ್ನೆಲೆಯಲ್ಲಿ ನಟ ಚೇತನ್​ ಅವರನ್ನು ಬಂಧಿಸಿ, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಬಿಡುಗಡೆ ಹೊಂದಿದ್ದಾರೆ.

ನ್ಯಾಯಾಂಗ ಬಂಧನದ ಬಳಿಕ ಅವರಿಗೆ ನೀಡಲಾಗಿದ್ದ ಗನ್​ಮ್ಯಾನ್ ವಾಪಸ್ ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ ಅವರನ್ನು ಚೇತನ್ ಭೇಟಿ ಆಗಿದ್ದಾರೆ.

ಆ ಬಳಿಕ ಮಾತನಾಡಿದ ನಟ ಚೇತನ್​, ‘ಗೌರಿ ಲಂಕೇಶ್ ಹತ್ಯೆಯ ಬಳಿಕ ನನಗೆ ಗನ್ ಮ್ಯಾನ್ ನೀಡಲಾಗಿತ್ತು. ಆದರೆ, ಈಗ ಅದನ್ನು ಹಿಂಪಡೆಯಲಾಗಿದೆ. ಮೊದಲಿನಿಂದಲೂ ನನಗೆ ಜೀವ ಬೆದರಿಕೆಯಿದೆ. ಗನ್ ಮ್ಯಾನ್ ನೀಡುವಂತೆ ಮನವಿ ಮಾಡಿದ್ದೇನೆ.

ಮನೆ ಬಳಿ ಬೀಟ್ ವ್ಯವಸ್ಥೆ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ. ನನ್ನ ಒಸಿಐ  ರದ್ದುಪಡಿಸುವ ಬಗ್ಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ನಾನೂ ಭಾರತೀಯ, ಕನ್ನಡಿಗನೇ. ಯಾವುದೇ ರೀತಿಯಲ್ಲೂ ಒಸಿಐ ನಿಯಮ ಉಲ್ಲಂಘಿಸಿಲ್ಲ’ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು