News Karnataka Kannada
Thursday, May 09 2024
ಸಾಂಡಲ್ ವುಡ್

ಪಿಆರ್‌ಕೆ ಪ್ರೊಡಕ್ಷನ್ಸ್‌ಯಿಂದ ಮಹತ್ವದ ಘೋಷಣೆ

ನಟ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಎಂದೆಂದಿಗೂ ನಮ್ಮ ಹೃದಯಲ್ಲಿ ಶಾಶ್ವತ ಎಂದು ಅಪ್ಪುಗೆ ಶುಭಹಾರೈಸಿದ್ದಾರೆ.
Photo Credit :

ಬೆಂಗಳೂರು : ಎಲ್ಲವೂ ಅಂದುಕೊಂಡಂತೆ ನಡೆದಿದ್ರೆ, ನವೆಂಬರ್ 1ರ ಕರ್ನಾಟಕ ರಾಜೋತ್ಸವ ದಿನ ನಟ ಪುನೀತ್ ರಾಜ್‌ಕುಮಾರ್ ಸಿದ್ಧಪಡಿಸಿದ್ದ ಡಾಕ್ಯುಮೆಂಟರಿ ಬಿಡುಗಡೆಯಾಗಬೇಕಿತ್ತು. ಆದ್ರೆ, ವಿಧಿಯಾಟದ ಮುಂದೆ ಸೋತ ಅಪ್ಪು ಅಕ್ಟೋಬರ್‌ 29ಕ್ಕೆ ಇಹಲೋಹ ತ್ಯಜಿಸಿಬಿಟ್ರು.

ಹಾಗಾಗಿ ಅವ್ರು ಕನಸಾದ ಕರುನಾಡ ಕುರಿತಾದ ವಿಶೇಷ ಡಾಕ್ಯುಮೆಂಟರಿ ಬಿಡುಗಡೆಯಾಗಲಿಲ್ಲ. ಇನ್ನೀದು ಕನಸಾಗಿಯೇ ಉಳಿಯಬೋದು ಅನ್ನೋ ನಿರಾಶೆಯಲ್ಲಿದ್ದ ಆಭಿಮಾನಿಗಳಿಗೆ ಸಧ್ಯ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಸಿಹಿ ಸುದ್ದಿ ನೀಡಿದ್ದಾರೆ.

ಹೌದು, ಪಿಆರ್‌ಕೆ ಪ್ರೊಡಕ್ಷನ್ಸ್‌ ಮಹತ್ವದ ಘೋಷಣೆಯೊಂದನ್ನ ಮಾಡಿದ್ದು, ”ಅಪ್ಪು ಅವರ ಕನಸೊಂದು ನವೆಂಬರ್ 1, 2021 ರಂದು ಬೆಳಕು ಕಾಣಬೇಕಿತ್ತು. ಆದರೆ, ಆ ಕನಸಿಗಿದು ಅಲ್ಪವಿರಾಮವಷ್ಟೇ. ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ” ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

ಅಂದ್ಹಾಗೆ, ಅಕ್ಟೋಬರ್ 27 ರಂದು ಫೇಸ್‌ಬುಕ್‌ನಲ್ಲಿ ಪುನೀತ್ ರಾಜ್‌ಕುಮಾರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದರು. ”ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದು ಪೋಸ್ಟ್ ಹಾಕಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು