ಪುನೀತ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಅಶ್ವಿನಿ

ನಟ ಪುನೀತ್‌ ರಾಜ್‌ಕುಮಾರ್‌ಅವರ ಆಭಿಮಾನಿಗಳಿಗೆ ಅಪ್ಪು ಪತ್ನಿ ಅಶ್ವಿನಿ ಸಿಹಿ ಸುದ್ದಿ ನೀಡಿದ್ದಾರೆ. ಅದನೆಂದರೆ ʼಗಂಧದ ಗುಡಿʼ ಸಾಕ್ಷ್ಯಚಿತ್ರದ ಟೀಸರ್‌ ನಾಳೆ ಬೆಳಿಗ್ಗೆ (ಡಿಸೆಂಬರ್‌ 6) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅಪ್ಪು ಪತ್ನಿ ಅಶ್ವಿನಿ, ‘ಹಿಂದೆಂದೂ ಕಾಣದ ಸಿನಿಮಾ ಅನುಭವ ನೀಡುವ ʼಗಂಧದ ಗುಡಿʼ ಸಾಕ್ಷ್ಯಚಿತ್ರದ ಟೀಸರ್‌ ನಾಳೆ ನಿಮ್ಮ ಮುಂದೆ @PRKAudio YouTube channelನಲ್ಲಿ’ ಎಂದು ಬರೆದುಕೊಂಡಿದ್ದಾರೆ.

ಪಿಆರ್‌ಕೆ ಪ್ರೊಡಕ್ಷನ್‌ ನಿರ್ಮಿತ ಸಾಕ್ಷ್ಯಚಿತ್ರ ಇದಾಗಿದ್ದು, ಅಕ್ಬೋಬರ್‌ 7ರಂದು ನಟ ಪುನೀತ್‌ ಅವ್ರು ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಹಂಚಿಕೊಂಡಿದ್ರು. ಅವ್ರ ಪೋಸ್ಟ್‌ನಲ್ಲಿ ಈ ಗಂಧದ ಗುಡಿ ಕುರಿತು ಈ ರೀತಿ ಬರೆದುಕೊಂಡಿದ್ದರು.

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದಿದೆ.

Sneha Gowda

Recent Posts

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

7 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

23 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

50 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

1 hour ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

2 hours ago