ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ತೆಲುಗು ನಟ ಅಲ್ಲು ಸೀರಿಶ್

ಕನ್ನಡ ಚಿತ್ರರಂಗದ ಯುವರತ್ನ ಹಾಗೂ ದೊಡ್ಮನೆ ಮಗ ಪುನೀತ್ ರಾಜ್‌ಕುಮಾರ್ ನಿಧನರಾಗಿ ಒಂದು ತಿಂಗಳು ಕಳೆದಿದೆ. ಬಹುಭಾಷಾ ಚಿತ್ರರಂಗದ ಗಣ್ಯರು ಪುನೀತ್ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಇದೀಗ ತೆಲುಗು ನಟ ಅಲ್ಲು ಸೀರಿಶ್ ಅವರು ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಸದಾಶಿವನಗರದ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಬಂದ ಅಲ್ಲು ಸೀರಿಶ್, ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಹಾಗೂ ರಾಜ್ ಕುಮಾರ್ ಕುಟುಂಬದ ಜೊತೆ ಒಂದು ಗಂಟೆಗಳ ಕಾಲ ಸಮಯ ಕಳೆದು, ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಒಂದು ಗಂಟೆಗಳ ಕಾಲ ರಾಜ್ ಕುಟುಂಬದ ಜೊತೆ ಮಾತುಕತೆ ನಡೆಸಿದ ಅಲ್ಲು ಸೀರಿಶ್, ಈಗ ನಾನು ವೈಯಕ್ತಿಕವಾಗಿ ಮನೆಗೆ ಬಂದಿದ್ದೇನೆ. ಸಂತೋಷದ ವಿಚಾರವಾಗಿ ಮತ್ತೆ ಈ ಮನೆಗೆ ಬಂದಾಗ ನಿಮ್ಮೊಂದಿಗೆ ಮಾತನಾಡುತ್ತೇನೆಂದು ಮಾಧ್ಯಮದವರಿಗೆ ಹೇಳಿ ಹೋದರು.

ಅಣ್ಣ ಅಲ್ಲು ಅರ್ಜುನ್ ರೀತಿ ಪುನೀತ್ ರಾಜ್‌ಕುಮಾರ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಅಲ್ಲು ಸೀರಿಶ್, ಬೆಂಗಳೂರಿಗೆ ಬಂದಾಗ ಪುನೀತ್ ರಾಜ್‌ಕುಮಾರ್ ಅವ್ರನ್ನು ಭೇಟಿ ಮಾಡಿ ಹೋಗುತ್ತಿದ್ದರು. ಕೆಲವು ತಿಂಗಳ ಹಿಂದೆ ಅಲ್ಲು ಸೀರಿಶ್ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿತ್ತು. ಈ ವಿಷಯ ತಿಳಿದ ಪುನೀತ್ ರಾಜ್‌ಕುಮಾರ್, ಅಲ್ಲು ಸೀರಿಶ್ ಅವರ ಸಿನಿಮಾದ ಚಿತ್ರೀಕರಣ ನಡೆಯುವ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು.

Gayathri SG

Recent Posts

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

4 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

22 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

44 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

56 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

1 hour ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

1 hour ago