News Karnataka Kannada
Saturday, May 04 2024
ಸಾಂಡಲ್ ವುಡ್

ಪುನೀತ್ ರಾಜ್‍ಕುಮಾರ್ ರಸ್ತೆಯ ಹೆಸರನ್ನು ಅಳಸಿ ಅವಮಾನ: ಕನ್ನಡಪರ ಸಂಘಟನೆಗಳು ಆಕ್ರೋಶ

ತಾಲೂಕಿನ ಜಾಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಗಾಳಿಗುಡ್ಡೆ ಗ್ರಾಮದಲ್ಲಿ ಫೆ.೨೯ ರಂದು ಡಾ. ಪುನೀತ್‌ರಾಜ್‌ಕುಮಾರ್ ಅವರ ಪುತ್ಥಳಿ ಲೋಕಾರ್ಪಣೆ ಮಾಡಲಾಗುವುದು ಎಂದು ಕಸಾಪ ಹೋಬಳಿ ಅಧ್ಯಕ್ಷ ವಾಸುಪೂಜಾರಿ ಹೇಳಿದರು.
Photo Credit :

ಪುನೀತ್​ ರಾಜ್​ಕುಮಾರ್​ ಅವರು ನಿಧನ ಹೊಂದಿ ಎರಡು ತಿಂಗಳು ಕಳೆಯುತ್ತ ಬಂದಿದೆ. ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಎಲ್ಲ ಕಡೆಗಳಲ್ಲೂ ನಡೆಯುತ್ತಿದೆ. ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಹಲವು ರಸ್ತೆಗಳಿಗೆ ಹಾಗೂ ಪಾರ್ಕ್​ಗೆ ಪುನೀತ್​ ಹೆಸರನ್ನು ಇಡುವ ಕೆಲಸ ನಡೆದಿದೆ. ಅದೇ ರೀತಿ ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ ಶಿವಮೊಗ್ಗ ಜಿಲ್ಲೆಯ, ಹೊಸನಗರ ತಾಲೂಕಿನ ಸಾಗರ ರಸ್ತೆಯಲ್ಲಿನ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆಯವರು ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು.

ಗುರುವಾರ (ಡಿಸೆಂಬರ್​ 23) ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿದ್ದಾರೆ. ಈ ಮೂಲಕ ನಾಮಫಲಕದಲ್ಲಿ ಬರೆದಿರುವ ಪುನೀತ್ ರಾಜ್‍ಕುಮಾರ್ ರಸ್ತೆಯ ಹೆಸರನ್ನು ಅಳಸಿ ಅವಮಾನ ಎಸಗಿದ್ದಾರೆ. ನಾಮಫಲಕಕ್ಕೆ ಬಿಳಿ ಬಣ್ಣ ಹಚ್ಚಿ ಅವಮಾನ ಮಾಡಿರುವವರ ವಿರುದ್ಧ ಕನ್ನಡಪರ ಸಂಘಟನೆಗಳು ಮತ್ತು ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದ್ಭುತವಾದ ಅಭಿನಯದ ಮೂಲಕ ಮೂಲಕ ಕೋಟ್ಯಂತರ ಜನ ಅಭಿಮಾನಿಗಳನ್ನು ಪುನೀತ್ ಹೊಂದಿದ್ದಾರೆ. ಪುನೀತ್​ ಅವರು ಯಾವುದೇ ಪ್ರಚಾರವಿಲ್ಲದೆ ಜನಸೇವೆಯನ್ನು ಮಾಡುವುದರ ಮೂಲಕ ಕನ್ನಡ ನಾಡಿನ ಜನತೆಯ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ನಾಮ ಫಲಕಕ್ಕೆ ಬಣ್ಣ ಹಚ್ಚಿ ಹೆಸರು ಅಳಿಸಿರುವ ಕಿಡಿಗೇಡಿಗಳ ಬಗ್ಗೆ ರಕ್ಷಣಾ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಕನ್ನಡಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು