ಮಲಯಾಳಂ

ಬಹುಭಾಷಾ ನಟಿ ಪಾರ್ವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಬಂಧನ

ತಿರುವನಂತಪುರ : ಆಹಾರ ಪೊಟ್ಟಣಗಳನ್ನು ಹೊತ್ತು ಮನೆಗೆ ಭೇಟಿ ನೀಡುತ್ತ ಬಹುಭಾಷಾ ತಾರೆ ಪಾರ್ವತಿ ತಿರುವೋತುಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.

ನಟಿಯನ್ನು ಹಿಂಬಾಲಿಸಿ, ಆಕೆಯ ಮನೆಗೆ ಬರುವುದೂ ಅಲ್ಲದೇ, ನಟಿಗೆ ನಿರಂತರ ಫೋನ್ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದ ಕೊಲ್ಲಂ ಮೂಲದ ಅಫ್ಸಲ್‌ನನ್ನು (34) ಪೊಲೀಸರು ಬಂಧಿಸಿದ್ದಾರೆ.

ತಿಂಡಿ ಪೊಟ್ಟಣವೆಲ್ಲಾ ತಮಗೆ ಬೇಡ ಎಂದು ಹಲವು ಬಾರಿ ಈತನಿಗೆ ಪಾರ್ವತಿ ಹೇಳಿದ್ದರೂ ಪುನಃ ಪುನಃ ಅದನ್ನು ತರುವ ನೆಪದಲ್ಲಿ ಮನೆಗೆ ಭೇಟಿ ನೀಡುತ್ತಿದ್ದ. ಅಲ್ಲಿರುವ ಭದ್ರತಾ ಸಿಬ್ಬಂದಿ ಜತೆ ಕ್ಯಾತೆ ತೆಗೆದು ಒಳಗೆ ನುಗ್ಗುತ್ತಿದ್ದ. ಈತನ ವಿರುದ್ಧ ಈ ಹಿಂದೆಯೇ ನಟಿ ದೂರು ದಾಖಲಿಸಿದ್ದರು. ಅಂತೂ ಆತನನ್ನು ಈಗ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯರ ಮೇಲೆ ನಾನಾ ವಿಧದಲ್ಲಿ ಆಗುತ್ತಿರುವ ದೌರ್ಜನ್ಯದ ಕುರಿತು ಪಾರ್ವತಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದರು.

ಮಲಯಾಳಿ ನಟಿಯಾಗಿರುವ ಪಾರ್ವತಿ, ಕನ್ನಡದಲ್ಲಿಯೂ ನಟಿಸಿದ್ದಾರೆ. ಪುನೀತ್‌ ರಾಜ್‌ಕುಮಾರ್‌ ಜತೆ ಮಿಲನ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೂ ಅಲ್ಲದೇ ‘ಪೃಥ್ವಿ’, ‘ಮಳೆ ಬರಲಿ ಮಂಜೂ ಇರಲಿ’, ‘ಅಂದರ್ ಬಾಹರ್’ ಮೊದಲಾದ ಚಿತ್ರಗಳಲ್ಲಿ ನಾಯಕಿಯಾಗಿದ್ದಾರೆ

Gayathri SG

Recent Posts

‘ಬಿರಿಯಾನಿ ಹಟ್’ ಹೊಟೇಲ್ ನಲ್ಲಿ ಬೆಂಕಿ ಅವಘಡ : ಲಕ್ಷಾಂತರ ರೂ.ನಷ್ಟ

ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…

1 min ago

ಉಡುಪಿ : ಮೇ 17ರಿಂದ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ

1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…

13 mins ago

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…

24 mins ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…

29 mins ago

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

1 hour ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 hour ago