ತಿರುವನಂತಪುರ : ಆಹಾರ ಪೊಟ್ಟಣಗಳನ್ನು ಹೊತ್ತು ಮನೆಗೆ ಭೇಟಿ ನೀಡುತ್ತ ಬಹುಭಾಷಾ ತಾರೆ ಪಾರ್ವತಿ ತಿರುವೋತುಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.
ನಟಿಯನ್ನು ಹಿಂಬಾಲಿಸಿ, ಆಕೆಯ ಮನೆಗೆ ಬರುವುದೂ ಅಲ್ಲದೇ, ನಟಿಗೆ ನಿರಂತರ ಫೋನ್ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದ ಕೊಲ್ಲಂ ಮೂಲದ ಅಫ್ಸಲ್ನನ್ನು (34) ಪೊಲೀಸರು ಬಂಧಿಸಿದ್ದಾರೆ.
ತಿಂಡಿ ಪೊಟ್ಟಣವೆಲ್ಲಾ ತಮಗೆ ಬೇಡ ಎಂದು ಹಲವು ಬಾರಿ ಈತನಿಗೆ ಪಾರ್ವತಿ ಹೇಳಿದ್ದರೂ ಪುನಃ ಪುನಃ ಅದನ್ನು ತರುವ ನೆಪದಲ್ಲಿ ಮನೆಗೆ ಭೇಟಿ ನೀಡುತ್ತಿದ್ದ. ಅಲ್ಲಿರುವ ಭದ್ರತಾ ಸಿಬ್ಬಂದಿ ಜತೆ ಕ್ಯಾತೆ ತೆಗೆದು ಒಳಗೆ ನುಗ್ಗುತ್ತಿದ್ದ. ಈತನ ವಿರುದ್ಧ ಈ ಹಿಂದೆಯೇ ನಟಿ ದೂರು ದಾಖಲಿಸಿದ್ದರು. ಅಂತೂ ಆತನನ್ನು ಈಗ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರ ಮೇಲೆ ನಾನಾ ವಿಧದಲ್ಲಿ ಆಗುತ್ತಿರುವ ದೌರ್ಜನ್ಯದ ಕುರಿತು ಪಾರ್ವತಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದರು.
ಮಲಯಾಳಿ ನಟಿಯಾಗಿರುವ ಪಾರ್ವತಿ, ಕನ್ನಡದಲ್ಲಿಯೂ ನಟಿಸಿದ್ದಾರೆ. ಪುನೀತ್ ರಾಜ್ಕುಮಾರ್ ಜತೆ ಮಿಲನ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೂ ಅಲ್ಲದೇ ‘ಪೃಥ್ವಿ’, ‘ಮಳೆ ಬರಲಿ ಮಂಜೂ ಇರಲಿ’, ‘ಅಂದರ್ ಬಾಹರ್’ ಮೊದಲಾದ ಚಿತ್ರಗಳಲ್ಲಿ ನಾಯಕಿಯಾಗಿದ್ದಾರೆ
ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…
1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…
ಫುಟ್ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…
ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್ ಫೋನ್ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…
ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…
ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.