ಬಾಲಿವುಡ್‌ ನಟ ಅಮಿರ್‌ ಖಾನ್‌-ಕಿರಣ್‌ ರಾವ್‌ ದಂಪತಿ ವಿಚ್ಛೇದನ!

ಹೊಸದಿಲ್ಲಿ: ಬಾಲಿವುಡ್‌ ನಟ ಆಮಿರ್‌ ಖಾನ್‌ ಮತ್ತು ಅವರ ಪತ್ನಿ ಕಿರಣ್‌ ರಾವ್‌ ವಿಚ್ಛೇದನಕ್ಕೆ ನಿರ್ಧರಿಸಿದ್ದಾರೆ. ಇಬ್ಬರೂ ಪರಸ್ಪರ ದೂರವಾಗುತ್ತಿರುವುದಾಗಿ ಶನಿವಾರ ಬೆಳಿಗ್ಗೆ ಘೋಷಿಸಿಕೊಂಡಿದ್ದಾರೆ. 15 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗಾಣಿಸಲು ಇಬ್ಬರೂ ನಿರ್ಧರಿಸಿದ್ದಾರೆ. 2005ರಲ್ಲಿ ಆಮಿರ್‌ ಖಾನ್‌ ಮತ್ತು ಕಿರಣ್‌ ರಾವ್‌ ವಿವಾಹವಾಗಿದ್ದರು.
ಕಿರಣ್‌ ರಾವ್‌ ಅವರನ್ನು ವಿವಾಹವಾಗುವ ಮೊದಲು ಆಮಿರ್‌ ಖಾನ್‌ ರೀನಾ ದತ್ತಾರನ್ನು ಮದುವೆಯಾಗಿದ್ದರು. ಆಮಿರ್‌-ರೀನಾ ದಂಪತಿಗೆ ಮಗಳು ಐರಾ ಖಾನ್‌ ಮತ್ತು ಮಗ ಜುನೈದ್‌ ಇದ್ದಾರೆ. ನಂತರ ʻಲಗಾನ್‌ʼ ಸಿನಿಮಾ ಚಿತ್ರೀಕರಣದ ವೇಳೆ ನಟ ಅಮಿರ್‌ ಖಾನ್‌ ಅವರು ಸಹ ನಿರ್ದೇಶಕಿಯಾಗಿದ್ದ ಕಿರಣ್‌ ರಾವ್‌ ಅವರನ್ನು ಭೇಟಿಯಾಗಿದ್ದರು. ಇವರಿಗೆ ʻಆಜಾದ್‌ʼ ಹೆಸರಿನ ಮಗನಿದ್ದಾನೆ.
‘ಕಳೆದ ಸುಂದರವಾದ 15 ವರ್ಷಗಳನ್ನು ನಾವಿಬ್ಬರು ಜೊತೆಯಾಗಿ ಕಳೆದಿದ್ದೇವೆ. ಜೀವನದ ಅನುಭಗಳು, ಸುಖ-ದುಃಖ, ಸಂತೋಷಗಳನ್ನು ಹಂಚಿಕೊಂಡಿದ್ದೇವೆ. ನಮ್ಮಿಬ್ಬರ ಸಂಬಂಧವು ಬೆಳೆದಿದ್ದೇ ಪರಸ್ಪರ ನಂಬಿಕೆ ಮತ್ತು ಪ್ರೀತಿಯಿಂದ. ಇದೀಗ ಇಬ್ಬರೂ ಹೊಸ ಜೀವನವನ್ನು ಆರಂಭಿಸಲು ನಿರ್ಧರಿಸಿದ್ದೇವೆ. ಪತಿ-ಪತ್ನಿಯಾಗಿ ಉಳಿಯದೆ, ಮಗ ಆಜಾದ್‌ನ ತಂದೆ-ತಾಯಿಯಾಗಷ್ಟೇ ಉಳಿಯಲಿದ್ದೇವೆ. ಸ್ವಲ್ಪ ದಿನಗಳ ಹಿಂದೆಯೇ ಪರಸ್ಪರ ದೂರವಾಗುವ ಬಗ್ಗೆ ಆಲೋಚನೆ ಮಾಡಿದ್ದೆವು. ಇದೀಗ ದೂರವಾಗಲು ಸಕಾಲವೆಂದೆನಿಸಿತು. ನಾವಿಬ್ಬರೂ ಮುಂದೆ ಕುಟುಂಬದ ಸದಸ್ಯರಾಗೇ ಇರಲಿದ್ದೇವೆ’ ಎಂದು ಜಂಟಿ ಹೇಳಿಕೆಯಲ್ಲಿ ಆಮಿರ್‌ ಮತ್ತು ಕಿರಣ್‌ ರಾವ್‌ ತಿಳಿಸಿದ್ದಾರೆ.

Indresh KC

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

1 hour ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago