News Karnataka Kannada
Monday, April 29 2024
ಸಾಂಡಲ್ ವುಡ್

ಬಿಗ್ ಬಾಸ್ ಸ್ಪರ್ಧಿ ರಾಜೀವ್ ಚಿತ್ರಕ್ಕೆ ಶುಭಹಾರೈಸಿದ ಕಿಚ್ಚ

Bigboss Kannada Main 240062021 Newsk 3136215106
Photo Credit :

ಬೆಂಗಳೂರು : ಬಿಗ್ ಬಾಸ್ ನ ಸ್ಪರ್ಧಿಯಾಗಿದ್ದ  ರಾಜೀವ್ “ಉಸಿರೇ ಉಸಿರೇ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇಲ್ಲಿನ ಖಾಸಗಿ ಹೋಟೆಲೋಂದರಲ್ಲಿ  ಚಿತ್ರದ  ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ ಚಿತ್ರ ತಂಡಕ್ಕೆ ಶುಭ ಹಾರೈಸಿದರು.

“ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ರಾಜೀವ. ಅವನಲ್ಲಿ ಈಗಲೂ ಏನೋ ಒಂಥರ ಮುಗ್ಧತೆ ಇದೆ. ಎಲ್ಲವನ್ನೂ ಬೇಗ ನಂಬಿ ಬಿಡುತ್ತಾನೆ. ಪುಣ್ಯ. ಅವನ ಪಕ್ಕದಲ್ಲಿರುವ ಹೆಂಡತಿ ಜಾಣೆ. ಆ ಹುಡುಗಿ ಇವನಿಗೆ ಎಲ್ಲವನ್ನೂ ಹೇಳಿ ಕೊಡುತ್ತಿದ್ದಾರೆ. ಸಿ.ಸಿ.ಎಲ್ ದಿನಗಳಿಂದಲೂ ನನಗೆ ಈತ ಪರಿಚಯ. ಅವನು ಕ್ರಿಕೆಟ್ ಸರಿಯಾಗಿ ಅಭ್ಯಾಸ ಮಾಡಿದ್ದರೆ, ಇಷ್ಟೊತ್ತಿಗೆ ರಾಜ್ಯ ಮಟ್ಟದಲ್ಲಿ ಆಡುತ್ತಿದ್ದ. ಈ ಸಿನಿಮಾದಿಂದ ರಾಜೀವ್ ಗೆ ಒಳ್ಳೆಯದಾಗಲಿ” ಎಂದರು.

ಕಿಚ್ಚ ಸುದೀಪ್​ ಅವರಿಗೆ ಚಿತ್ರತಂಡ ಬೆಳ್ಳಿ ಪೆನ್ ​ಅನ್ನು ಉಡುಗರೆಯಾಗಿ ನೀಡಿದರು. ಈ ಪೆನ್​ ಅನ್ನು ಸುದೀಪ್​ ಅವರು ನಿರ್ದೇಶಕರಿಗೆ ನೀಡಿ, ನಿಮ್ಮ ಮುಂದಿನ ಕೆಲಸಗಳೆಲ್ಲಾ ಸುಲಲಿತವಾಗಿ ನಡೆಯಲಿ ಎಂದು ಹಾರೈಸಿದರು. ನಮ್ಮ ನಾಲ್ಕು ವರ್ಷಗಳ ಶ್ರಮಕ್ಕೆ ಈಗ ಉತ್ತಮ ಕಾಲ ಕೂಡಿ ಬಂದಿದೆ.‌ ಎಲ್ಲರ ಹಾರೈಕೆಯು ನಮಗಿರಲಿ’ ಎಂದು ಕೋರಿದರು ರಾಜೀವ್​.

ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್  ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದಾರೆ. ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜಿಸುತ್ತಿದ್ದು, ಶರವಣನ್ ಛಾಯಾಗ್ರಹಣವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು