News Karnataka Kannada
Thursday, May 02 2024
ಸಾಂಡಲ್ ವುಡ್

ಬೆಂಗಳೂರು: ಬಘೀರ ಚಿತ್ರಕ್ಕೆ ಇಂದು ಮುಹೂರ್ತ

Untitled 1 Recovered
Photo Credit :

ಬೆಂಗಳೂರು: ಉಗ್ರ ಖ್ಯಾತಿಯ ನಟ ಶ್ರೀಮುರಳಿ ಹಾಗೂ ಕೆಜಿಎಫ್ ಯಶಸ್ಸಿನಲ್ಲಿರುವ ಪ್ರಶಾಂತ್ ನೀಲ್ ಮತ್ತೆ ಒಂದಾಗಿದ್ದು, ನೂತನ ಚಿತ್ರದ ಮುಹೂರ್ತ ಕಾರ್ಯಕ್ರಮ ಇಂದು ಬೆಂಗಳೂರಿನಲ್ಲಿ ನೆರವೇರಿದೆ.

ಹೊಂಬಾಳೆ ಫಿಲ್ಮ್ಸ್‌ನ ಮತ್ತೊಂದು ಅದ್ದೂರಿ ಚಿತ್ರ ‘ಬಘೀರ’ ಇಂದು ಸೆಟ್ಟೇರಿದ್ದು, ಈ ಚಿತ್ರದ ಮೂಲಕ ಉಗ್ರಂ ಖ್ಯಾತಿಯ ಶ್ರೀಮುರಳಿ ಮತ್ತು ಪ್ರಶಾಂತ್ ನೀಲ್ ಜೋಡಿ ಮತ್ತೆ ಒಂದಾಗಿದೆ.

ಈ ಬಘೀರ ಚಿತ್ರಕ್ಕೆ ಡಾ.ಸೂರಿ ಚಿತ್ರಕಥೆ, ನಿರ್ದೇಶನವಿದ್ದುಸ, ಈ ಚಿತ್ರಕ್ಕೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು. ಈ ಚಿತ್ರಕ್ಕೆ ಶ್ರೀಮುರಳಿ ನಾಯಕ. ಚಿತ್ರದ ಮೊದಲ ದೃಶ್ಯಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಹೋದರ ಮಂಜುನಾಥ್ ಆರಂಭ ಫಲಕ ತೋರಿದರು. ನಿರ್ದೇಶಕ ಸೂರಿ ಅವರ ತಾಯಿ ಸರೋಜಾ ಅವರು ಕ್ಯಾಮೆರಾ ಚಾಲನೆ ಮಾಡಿದರು. ಮೇ ಕೊನೆಯ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಎ.ಜೆ. ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು