ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಮ್ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿದ್ದು, ಶಿವರಾಮಣ್ಣ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಶಿವರಾಂ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಅಂತ್ಯಸಂಸ್ಕಾರಕ್ಕೂ ಮೊದಲು ಪಾರ್ಥಿವ ಶರೀರಕ್ಕೆ ವಿಶೇಷ ಪೂಜೆ ಮಾಡಲಾಯಿತು. ತುಪ್ಪ, ಹೂವು, ಗಂಧ, ವಿಭೂತಿ, ಖರ್ಜೂರ, ಕೆಂಪು, ಕಲ್ಲು ಸಕ್ಕರೆ, ಹಾಲು, ಮೊಸರು , ಅವಲಕ್ಕಿಯಿಂದ ಅಷ್ಟಾಭಿಷೇಕದ ಮಾಡಲಾಯಿತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಿವರಾಮ್ ಅವರು ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ.