News Karnataka Kannada
Monday, May 06 2024
ಸಾಂಡಲ್ ವುಡ್

ಮತ್ತೆ ಸ್ಯಾಂಡಲ್‌ವುಡ್‌ಗೆ ಕುಮಾರಣ್ಣನ ಎಂಟ್ರಿ

Hd Kumara Swamy 15 7 21
Photo Credit :

ಬೆOಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೆ ಚಿತ್ರ ನಿರ್ಮಾಣದತ್ತ ಗಮನಹರಿಸಿದ್ದಾರೆ. ಎಸ್.ನಾರಾಯಣ್ ನಿರ್ದೇಶನದ ಕಾದಂಬರಿ ಆಧರಿತ ‘ ಹೆಜ್ಜೆ’ ಎಂಬ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ ಎಂಬ ಸುದ್ದಿ ಗಾಂಧಿನರದಲ್ಲಿ ಕೇಳಿಬರುತ್ತಿದೆ.

ಕನ್ನಡ ಸಾಹಿತ್ಯದಲ್ಲಿ ಸಿನಿಮಾ ಆಗುವಂತಹ ಕಾದಂಬರಿಗಳು ಹಲವಾರಿವೆ. ಒಂದಷ್ಟು ನಿರ್ದೇಶಕರು ಕಾದಂಬರಿಗಳನ್ನು ಸಿನಿಮಾ ಮಾಡಿ ಯಶಸ್ವಿಯೂ ಆಗಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಈಗ ಕನ್ನಡದ ಖ್ಯಾತ ಸಾಹಿತಿ ವ್ಯಾಸರಾಯ ಬಲ್ಲಾಳರ ‘ಹೆಜ್ಜೆ’ ಕಾದಂಬರಿ ಸಿನಿಮಾ ಆಗುತ್ತಿದ್ದು, ಈ ಕಾದಂಬರಿಗಾಗಿ ಹಿರಿಯ ನಿರ್ದೇಶಕ ಎಸ್‌. ನಾರಾಯಣ್‌ ಮತ್ತು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಜತೆಯಾಗಿದ್ದಾರೆ.

ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿಯವರು ರಾಜಕೀಯಕ್ಕೆ ಬರುವುದಕ್ಕೂ ಮುನ್ನ ಸಿನಿಮಾ ರಂಗದಲ್ಲಿ ವಿತರಕರಾಗಿ, ನಿರ್ಮಾಪಕರಾಗಿ ಹೆಸರು ಮಾಡಿದವರು. ‘ಸೂರ್ಯವಂಶ’, ‘ಚಂದ್ರಚಕೋರಿ’, ‘ಗಲಾಟೆ ಅಳಿಯಂದ್ರು’ ತರಹದ ಸೂಪರ್‌ ಹಿಟ್‌ ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದರು. ಈ ಮೂರು ಸಿನಿಮಾಗಳನ್ನೂ ಎಸ್‌. ನಾರಾಯಣ್‌ ಅವರೇ ನಿರ್ದೇಶನ ಮಾಡಿದ್ದರು ಎಂಬುದು ವಿಶೇಷ. ‘ಹಾಲುಂಡ ತವರು’, ‘ಪಂಚಮವೇದ’ ಸೇರಿದಂತೆ ಕೆಲ ಸಿನಿಮಾಗಳನ್ನು ವಿತರಣೆ ಮಾಡಿದ್ದರು. ಕಡೆಯದಾಗಿ ತಮ್ಮ ಪುತ್ರ ನಿಖಿಲ್‌ ಕುಮಾರಸ್ವಾಮಿ ನಾಯಕರಾಗಿದ್ದ ‘ಸೀತಾರಾಮ ಕಲ್ಯಾಣ’ ಸಿನಿಮಾವನ್ನು ನಿರ್ಮಿಸಿದ್ದರು. ಈಗ ಮತ್ತೆ ನಿರ್ಮಾಪಕರಾಗಿ ಮತ್ತೊಂದು ಇನ್ನಿಂಗ್ಸ್‌ಗೆ ಸಿದ್ಧತೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು