News Karnataka Kannada
Sunday, April 28 2024
ಸಾಂಡಲ್ ವುಡ್

ಮೇಕೆದಾಟು ಯೋಜನೆಯ ಹೋರಾಟಕ್ಕೆ ಬೆಂಬಲ ಸೂಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Mukhyamantri Chandru appointed as AAP state campaign committee chief
Photo Credit :

ಬೆಂಗಳೂರು : ಮೇಕೆದಾಟು ಯೋಜನೆಯ ಹೋರಾಟಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಈ ಕುರಿತು ಹಿರಿಯ ನಟಿಯರಾದ ಉಮಾಶ್ರೀ, ಜಯಮಾಲ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಮತ್ತು ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಶುಕ್ರವಾರ ಸುದ್ದಿಗೋಷ್ಠಿ ನಡೆಸಿದರು. ಕರೊನಾ ಹಿನ್ನೆಲೆ ಸರ್ಕಾರ ಜಾರಿ ಮಾಡಿರುವ ಸರ್ಕಾರದ ರೂಲ್ಸ್ ಅನ್ನು ಫಾಲೋ ಮಾಡ್ತೀವಿ. ಹಾಗೇ ಕರ್ಫ್ಯೂ ಇಲ್ಲದಿರುವ ದಿನ ಮೇಕೆದಾಟು ಹೋರಾಟದಲ್ಲಿ ಪಾಲ್ಗೊಂಡು ಬೆಂಬಲ ಕೊಡ್ತೀವಿ. ಪಾದಯಾತ್ರೆಗೆ ಕಲಾವಿದರನ್ನ ನಾವು ಕರೆಯುತ್ತೇವೆ. ಈ ಹಿಂದೆ ಕೂಡ ಮಹಾದಾಯಿ, ಕಾವೇರಿ ಹೋರಾಟಕ್ಕೆ ಬೆಂಬಲ ಕೊಟ್ಟಿದ್ವಿ. ನಾಡು-ನುಡಿ-ಜಲದ ವಿಚಾರ ಬಂದ್ರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯಾವಾಗಲೂ ಬೆಂಬಲ ನೀಡುತ್ತೆ ಎಂದರು.

ಇದೊಂದು ವಿಶಿಷ್ಟವಾದ ಹೋರಾಟ. ನಮ್ಮ ನೀರಿಗಾಗಿ ನಾವು ಹೋರಾಟ ಮಾಡಬೇಕು. ಎಲ್ಲಾ ಕೇಸ್​ಗಳು ಈಗ ಮುಕ್ತಾಯವಾಗಿವೆ. ಕನ್ನಡ ಚಿತ್ರರಂಗಕ್ಕೆ ಒಂದು ಪರಂಪರೆ ಇದೆ. ಡಾ. ರಾಜ್ ಕುಮಾರ್ ಅವರು ಆ ಪರಂಪರೆಯನ್ನ ಹಾಕಿಕೊಟ್ಟಿದ್ದಾರೆ. ಐತಿಹಾಸಿಕ ಹೋರಾಟವನ್ನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಮ್ಮಿಕೊಂಡಿದ್ದಾರೆ. ಈ ಹೋರಾಟಕ್ಕೆ ಎಲ್ಲರೂ ಬೆಂಬಲ ಕೊಡಬೇಕು ಅಂತ ಮನವಿ ಮಾಡ್ತೀವಿ. ನೀರು ಇಲ್ಲದ ಸ್ಥಿತಿ ಬಂದಿದೆ. ಮೇಕೆದಾಟು ಯೋಜನೆಯಿಂದ ನೀರು ಸಿಗಲಿದೆ ಎಂದು ಜಯಮಾಲ ಹೇಳಿದರು.

ನಟಿ ಉಮಾಶ್ರೀ ಮಾತನಾಡಿ, ಮೇಕೆದಾಟು ಹೋರಾಟಕ್ಕೆ ವಾಣಿಜ್ಯ ಮಂಡಳಿ ಬೆಂಬಲ ನೀಡಿದ್ದು ಖುಷಿಯಾಗಿದೆ. ರಾಕ್​ಲೈನ್ ವೆಂಕಟೇಶ್ ಅವರು ಪತ್ರ ಕಳುಹಿಸಿದ್ದಾರೆ. ಕಲಾವಿದರು ಇಂತಹ ಸಂದರ್ಭಗಳಲ್ಲಿ ಋಣ ಸಂದಾಯ ಮಾಡಬೇಕು. ಜನರಿಂದ ನಾವು ಎಲ್ಲವನ್ನೂ ಪಡೆದಿದ್ದೇವೆ. ಜನರಿಗಾಗಿ ಹೋರಾಟ ಮಾಡಬೇಕು. ಎಲ್ಲಾ ನಾಯಕ-ನಾಯಕಿಯರು ಸ್ವಯಂಪ್ರೇರಿತರಾಗಿ ಬೆಂಬಲ ಕೊಡಬೇಕು ಎಂದು ಮನವಿ ಮಾಡಿದರು.

ನಟ ಮದನ್ ಪಟೇಲ್ ಮಾತನಾಡಿ, ಇದು ಯಾವುದೇ ರಾಜಕೀಯ ಬಣ್ಣವಿಲ್ಲದ ಹೋರಾಟ. ನಮ್ಮ ನೀರು, ನಮ್ಮ ಹಕ್ಕು. ಈ ಹೋರಾಟ ಕನ್ನಡಿಗರ ಪರವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು