News Karnataka Kannada
Thursday, May 16 2024
ಸಾಂಡಲ್ ವುಡ್

ಯಾವುದೇ ಕಾರಣಕ್ಕೂ `ಕರ್ನಾಟಕ ಬಂದ್’ ಮುಂದೂಡುವುದಿಲ್ಲ : ವಾಟಾಳ್ ನಾಗರಾಜ್

Photo Credit :

ಬೆಂಗಳೂರು : ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್  ಮುಂದೂಡುವುದಿಲ್ಲ. ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ ನೀಡಲೇಬೇಕು. ನಮಗೆ ಯಾವುದೇ ರೀತಿಯ ನೈತಿಕ ಬೆಂಬಲ ಬೇಡ. ಅವರಿಗೊಸ್ಕರ ಬಂದ್ ದಿನಾಂಕ ಬದಲಿಸಲು ಸಾಧ್ಯವಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ಮುಂದೂಡುವುದಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿ ಎಂಇಎಸ್ ಮತ್ತು ಶಿವಸೇನಾ ಪುಂಡಾಟಿಕೆ ಹೆಚ್ಚಾಗಿದ್ದು, ರಾಜ್ಯದಲ್ಲಿ ಎಂಇಸ್ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31 ಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು