ಒಂಗೋಲ್ : ರಾಬರ್ಟ್ ಚಿತ್ರದ ತೆಲುಗು ವರ್ಷನ್ ‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು ಸಿನಿಮಾಗಳಲ್ಲಿ ಹಾಡುವ ಮೂಲಕ ತುಂಬಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹಾಡಿದ್ದ ಪುಷ್ಪ ಚಿತ್ರದ ಕನ್ನಡ ವರ್ಷನ್ ‘ಊ ಅಂತಿಯಾ ಮಾವ ಊಹು ಅಂತಿಯಾ’ ಕೂಡ ತುಂಬಾ ಸದ್ದು ಮಾಡಿದೆ.
ಅಲ್ಲದೆ, ಏಕ್ ಲವ್ ಯಾ ಚಿತ್ರದ ‘ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ’ ಎಂಬ ಹಾಡು ಕೂಡ ಯೂಟ್ಯೂಬ್ನಲ್ಲಿ ಧೂಳೆಬ್ಬಿಸುತ್ತಿದೆ.
ತಮ್ಮ ವಿಶಿಷ್ಟ ಕಂಠದಿಂದಲೇ ಜನಪ್ರಿಯರಾಗಿರುವ ಮಂಗಲಿ ಇದೀಗ ಸ್ಟಾರ್ ಸಿಂಗರ್ ಎಂಬ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿಯೇ ಅವರು ಎಲ್ಲಿಯೇ ಹೋದರು ಸೆಲ್ಫಿಗಾಗಿ ಜನ ಮುಗಿಬೀಳುತ್ತಾರೆ. ಸಿನಿಮಾ ಹಾಡು ಮಾತ್ರವಲ್ಲದೇ, ಅನೇಕ ಕಾರ್ಯಕ್ರಮಗಳನ್ನು ಮಂಗಲಿ ನಡೆಸಿಕೊಡುತ್ತಾರೆ. ಇತ್ತೀಚೆಗಷ್ಟೇ ಅವರು ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಒಂಗೋಲ್ ಪಟ್ಟಣಕ್ಕೆ ಕಾರ್ಯಕ್ರಮ ನಿಮಿತ್ತ ತೆರಳಿದಾಗ ಮುಜುಗರದ ಪ್ರಸಂಗವೊಂದು ಜರುಗಿದೆ.
ಕಾರ್ಯಕ್ರಮ ಮುಗಿಸಿ ಕಾರು ಹತ್ತಲು ಹೋಗುವಾಗ ಅಲ್ಲಿಯೇ ಇದ್ದ ಯುವಕರ ಗುಂಪು ಸೆಲ್ಫಿಗಾಗಿ ಮಂಗಲಿ ಅವರನ್ನು ಸುತ್ತುವರಿದಿದ್ದಾರೆ. ಯುವಕರ ಗುಂಪು ತುಂಬಾ ಹತ್ತಿರಕ್ಕೆ ಬಂದಿದ್ದರಿಂದ ಅವರು ಮುಜುಗರಕ್ಕೀಡಾದರು. ಅಲ್ಲದೆ, ಯುವಕರ ಅಸಭ್ಯ ವರ್ತನೆ ನೋಡಿ ತಾಳ್ಮೆ ಕಳೆದುಕೊಂಡ ಮಂಗಲಿ ಜೋರು ಧ್ವನಿಯಲ್ಲಿ ಕೂಗಾಡಿದ್ದಲ್ಲದೆ, ಕೈಯಿಂದ ಹೊಡೆಯಲು ಯತ್ನಿಸಿದರು.
ಇದಾದ ಬಳಿಕ ತನ್ನ ಡ್ರೈವರ್ಗೆ ಕರೆ ಮಾಡಿ ಕಾರನ್ನು ಬೇಗ ತೆಗೆದುಕೊಂಡು ಬಾ ಎಂದು ಕೂಗಿದರು. ಅಲ್ಲದೆ, ತನ್ನ ಸಹಾಯಕರನ್ನು ಕೂಗಿ ಅವರ ಮೇಲೂ ಕೂಗಾಡಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…