News Karnataka Kannada
Wednesday, May 08 2024
ಸಾಂಡಲ್ ವುಡ್

ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ನಟ ಕಟ್ಟೆ ರಾಮಚಂದ್ರ ಇನ್ನಿಲ್ಲ

Katte Ramachandra
Photo Credit : News Kannada

ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ, ನಟ ಕಟ್ಟೆ ರಾಮಚಂದ್ರ ಅವರು  ಇವರು ಬೆಂಗಳೂರಿನ ಸೇಂಟ್ ಜೋನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇವರಿಗೆ 75 ವರ್ಷ ವಯಸ್ಸಾಗಿತ್ತು ಇಂದು ಮಧ್ಯಾಹ್ನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

1947ರ ಫೆಬ್ರವರಿ 15ರಂದು ಜನಿಸಿದ್ದ ಕಟ್ಟೆ ರಾಮಚಂದ್ರ ಅವರು ನಿರ್ದೇಶನ, ನಿರ್ಮಾಣ, ನಟನೆಯಲ್ಲೂ ತೊಡಗಿಸಿಕೊಂಡಿದ್ದರು. ತಬ್ಬಲಿ ನೀನಾದೆ ಮಗನೆ, ಒಂದು ಪ್ರೇಮದ ಕಥೆ, ಗೀಜಗನ ಗೂಡು, ನಮ್ಮಮ್ಮ ತಾಯಿ ಅಣ್ಣಮ್ಮ, ಗ್ರಹಣ, ಪ್ರೇಮ ಮತ್ಸರ, ಅಂತರಾಳ, ಕಾಡಿನ ಬೆಂಕಿ, ಬಿಂಬ… ಸೇರಿದಂತೆ ಚಿತ್ರಗಳಲ್ಲಿ ನಟಿಸಿದ್ದಾರೆ.

ಕಟ್ಟೆ ರಾಮಚಂದ್ರರು ನಿರ್ದೇಶಿಸಿದ ‘ಅರಿವು’ ಚಿತ್ರಕ್ಕೆ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಬಂದಿದೆ. ‘ವೈಶಾಖದ ದಿನಗಳು’ ಸಿನಿಮಾ ಕೂಡ ಇವರ ನಿರ್ದೇಶನದಲ್ಲೇ ತೆರೆಕಂಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು