ರಾಜ್ ಬಿ. ಶೆಟ್ಟಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಬಿಡುಗಡೆ

ಬೆಂಗಳೂರು: ಒಂದು ಮೊಟ್ಟೆಯ ಕಥೆ, ಮಾಯಾಬಜಾರ್ ಸಿನಿಮಾಗಳ ಖ್ಯಾತಿಯ ರಾಜ್ ಬಿ. ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ತಮ್ಮ ಪರಂವಾಹ್ ಬ್ಯಾನರ್ ಬಿಡುಗಡೆಗೊಳಿಸುತ್ತಿರುವುದಾಗಿ ರಕ್ಷಿತ್ ಶೆಟ್ಟಿ ಘೋಷಿಸಿದ್ದಾರೆ. ಗ್ಯಾಂಗ್ ಸ್ಟರ್ ಚಿತ್ರವಾದ ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿಯವರಿಗೆ ಎದುರಾಗಿ ರಿಷಭ್ ಶೆಟ್ಟಿ ನಟಿಸುತ್ತಿದ್ದಾರೆ.

ರಕ್ಷಿತ್ ಶೆಟ್ಟಿ, ತಾವು ಈ ಸಿನಿಮಾವನ್ನು ವೀಕ್ಷಿಸಿದ್ದು, ಪ್ರೇಕ್ಷಕರಿಗೆ ತಮ್ಮ ಪ್ರೊಡಕ್ಷನ್ ತಂಡದ ವತಿಯಿಂದ ಇಂಥ ಒಳ್ಳೆಯ ಸಿನಿಮಾವನ್ನು ಸಾದರ ಪಡಿಸಲು ಹೆಮ್ಮೆಯಾಗುತ್ತಿದೆ ಎಂಡು ಹೇಳಿದ್ದಾರೆ. ಈ ಹಿಂದೆ ಲೂಸಿಯ, ರಾಮಾ ರಾಮಾ ರೇ, ದಿಯಾ ಸಿನಿಮಾಗಳ ಬಗ್ಗೆಯೂ ಒಳ್ಳೆಯ ಮಾತುಗಳನ್ನಾಡಿ ಪ್ರೋತ್ಸಾಹಿಸಿದ್ದೆ. ಒಳ್ಳೆಯ ಪ್ರಾಜೆಕ್ಟ್ ಗಳ ಬಗ್ಗೆ ಪ್ರಚಾರ ನೀಡಲು ನಾನು ಸದಾ ಸಿದ್ಧ ಎಂದು ರಕ್ಷಿತ್ ಶೆಟ್ಟಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ ಬಿ ಶೆಟ್ಟಿ ತಾವು ಈ ಹಿಂದೆ ನಿರ್ಮಿಸಿದ್ದ ಒಂದು ಮೊಟ್ಟೆಯ ಕಥೆ ಸಿನಿಮಾಗೆ ಪವನ್ ಕುಮಾರ್ ಪ್ರೋತ್ಸಾಹ ಲಭ್ಯವಾಗಿತ್ತು. ಇದೀಗ ತಮ್ಮ ನಿರ್ದೇಶನದ ಎರಡನೇ ಸಿನಿಮಾವನ್ನು ಮೆಚ್ಚಿಕೊಂಡು ಪ್ರೇಕ್ಷಕರೆದುರು ತರುವಲ್ಲಿ ರಕ್ಷಿತ್ ಶೆಟ್ಟಿ ಬೆಂಬಲಕ್ಕೆ ನಿಂತಿದ್ದಾರೆ. ಇದು ನನ್ನ ಅದೃಷ್ಟ ಎಂದಿದ್ದಾರೆ.

Sneha Gowda

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

8 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

12 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

27 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

34 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

44 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

55 mins ago