ರಿಷಬ್ ಶೆಟ್ಟಿ ಅವರು ‘ರಿಷಬ್ ಶೆಟ್ಟಿ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಮೂಲಕ ಭಿನ್ನ ಸಿನಿಮಾಗಳನ್ನು ತೆರೆಗೆ ತಂದಿದ್ದಾರೆ. ಪ್ರಯೋಗಾತ್ಮಕ ಸಿನಿಮಾಗಳಿಗೆ ರಿಷಬ್ ಹೆಚ್ಚು ಆದ್ಯತೆ ನೀಡುತ್ತಾರೆ. ಈಗ ಯುವ ನಿರ್ದೇಶಕ ನಟೇಶ್ ಹೆಗಡೆ ನಿರ್ದೇಶನದ ‘ಪೆದ್ರೊ’ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ಮಿಸಿದ್ದಾರೆ.
ಇಂದು ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಪ್ರಿಯರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ಹಲವು ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಕೆಲವು ಕಡೆಗಳಲ್ಲಿ ಪ್ರಶಸ್ತಿ ಕೂಡ ಬಾಚಿಕೊಂಡಿದೆ. ಟ್ರೇಲರ್ ನೋಡಿದ ನಂತರ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿದೆ.
ಗೋಪಾಲ್ ಹೆಗಡೆ, ರಾಮಕೃಷ್ಣ ಭಟ್ ದಂಡಿ, ರಾಜ್ ಬಿ. ಶೆಟ್ಟಿ, ಮೇದಿನಿ ಕೆಳಮನೆ, ನಾಗರಾಜ್ ಹೆಗಡೆ ಮೊದಲಾದವರು ‘ಪೆದ್ರೊ’ ಚಿತ್ರದಲ್ಲಿ ನಟಿಸಿದ್ದಾರೆ. ಇವರಲ್ಲಿ ಬಹುತೇಕ ಕಲಾವಿದರು ಸ್ಥಳೀಯರು. ನಿರ್ದೇಶಕ ನಟೇಶ್ ತಂದೆ ಗೋಪಾಲ್ ಹೆಗಡೆ ಅವರು ಪೆದ್ರೊ ಪಾತ್ರವನ್ನು ಮಾಡಿದ್ದಾರೆ. ಇವರು ಎಲ್ಲಿಯೂ ನಟನೆ ಕಲಿತವರಲ್ಲ. ಆದಾಗ್ಯೂ, ಅವರು ಉತ್ತಮವಾಗಿ ಅಭಿನಯಿಸಿದ್ದಾರೆ ಎಂಬುದು ಟ್ರೇಲರ್ ಮೂಲಕ ಸಾಬೀತಾಗಿದೆ.
‘ಒಂದು ಮೊಟ್ಟೆಯ ಕಥೆ’, ‘ಗರುಡ ಗಮನ ವೃಷಭ ವಾಹನ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ರಾಜ್ ಬಿ. ಶೆಟ್ಟಿ ಕೂಡ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಗ್ರಾಮೀಣ ಸೊಗಡಿನಲ್ಲಿ ಈ ಸಿನಿಮಾ ಮೂಡಿ ಬಂದಿದೆ. ‘ಒಂದು ಹಳ್ಳಿಯಲ್ಲಿರುವ ಎಲೆಕ್ಟ್ರಿಷಿಯನ್ ಅಪರಾಧ ಎಸಗುತ್ತಾನೆ. ಅಲ್ಲಿಂದ ಆತನ ಹಾಗೂ ಸಮಾಜದ ನಡುವೆ ತಿಕ್ಕಾಟ ಆರಂಭ ಆಗುತ್ತದೆ. ಇದನ್ನು ತೋರಿಸುವ ಕೆಲಸ ಸಿನಿಮಾದಲ್ಲಿ ಆಗಿದೆ. ‘ಪೆದ್ರೊ’ ಎಂಬುದು ಕ್ರಿಶ್ಚನ್ ವ್ಯಕ್ತಿಯ ಹೆಸರು. ಪೀಟರ್ ಹೆಸರಿನ ಅಪಭ್ರಂಶ ‘ಪೆದ್ರೊ’. ಸಿನಿಮಾ ನೋಡಿ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಅವರು ಸಿನಿಮಾ ನೋಡಿ ಮೆಚ್ಚಿಕೊಂಡರು. ಅವರು ಈ ಚಿತ್ರವನ್ನು ನಂಬಿ, ನಿರ್ಮಾಣ ಮಾಡಿದ್ದಾರೆ’ ಎಂದು ಮಾಹಿತಿ ನೀಡುತ್ತಾರೆ ನಿರ್ದೇಶಕ ನಟೇಶ್ ಹೆಗಡೆ.
ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ‘ಪೆದ್ರೊ’ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಿಷಬ್, ‘ಪೆದ್ರೊ ಟ್ರೇಲರ್ ಬಿಡುಗಡೆಯಾಗಿದೆ. ನಮ್ಮ ಪರಿಶ್ರಮದ ಫಲ ನಿಮ್ಮ ಮುಂದೆ. ನಮ್ಮ ತಲೆಮಾರಿನ ಉತ್ಕೃಷ್ಟ ನಿರ್ದೇಶಕರಲ್ಲಿ ಒಬ್ಬರಾದ ವೆಟ್ರಿಮಾರನ್ರವರು ನಮ್ಮ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಶೀಘ್ರವೇ ಈ ಸಿನಿಮಾ ರಿಲೀಸ್ ಆಗಲಿದೆ’ ಎಂದು ಬರೆದುಕೊಂಡಿದ್ದಾರೆ.
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…