ರಿಷಬ್​ ಶೆಟ್ಟಿ ನಿರ್ಮಾಣ, ನಟೇಶ್ ಹೆಗಡೆ​ ನಿರ್ದೇಶನದ ‘ಪೆದ್ರೊ’ ಟ್ರೇಲರ್​ ರಿಲೀಸ್

ರಿಷಬ್ ಶೆಟ್ಟಿ  ಅವರು ‘ರಿಷಬ್​ ಶೆಟ್ಟಿ ಫಿಲ್ಮ್ಸ್​’  ನಿರ್ಮಾಣ ಸಂಸ್ಥೆ ಮೂಲಕ ಭಿನ್ನ ಸಿನಿಮಾಗಳನ್ನು ತೆರೆಗೆ ತಂದಿದ್ದಾರೆ. ಪ್ರಯೋಗಾತ್ಮಕ ಸಿನಿಮಾಗಳಿಗೆ ರಿಷಬ್​ ಹೆಚ್ಚು ಆದ್ಯತೆ ನೀಡುತ್ತಾರೆ. ಈಗ ಯುವ ನಿರ್ದೇಶಕ ನಟೇಶ್​ ಹೆಗಡೆ  ನಿರ್ದೇಶನದ ‘ಪೆದ್ರೊ’ ಚಿತ್ರವನ್ನು ರಿಷಬ್​ ಶೆಟ್ಟಿ ನಿರ್ಮಿಸಿದ್ದಾರೆ.

ಇಂದು ಚಿತ್ರದ ಟ್ರೇಲರ್​ ರಿಲೀಸ್ ಆಗಿದ್ದು, ಸಿನಿಪ್ರಿಯರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ಹಲವು ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಕೆಲವು ಕಡೆಗಳಲ್ಲಿ ಪ್ರಶಸ್ತಿ ಕೂಡ ಬಾಚಿಕೊಂಡಿದೆ. ಟ್ರೇಲರ್​ ನೋಡಿದ ನಂತರ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿದೆ.

ಗೋಪಾಲ್​ ಹೆಗಡೆ, ರಾಮಕೃಷ್ಣ ಭಟ್​ ದಂಡಿ, ರಾಜ್​ ಬಿ. ಶೆಟ್ಟಿ, ಮೇದಿನಿ ಕೆಳಮನೆ, ನಾಗರಾಜ್​ ಹೆಗಡೆ ಮೊದಲಾದವರು ‘ಪೆದ್ರೊ’ ಚಿತ್ರದಲ್ಲಿ ನಟಿಸಿದ್ದಾರೆ. ಇವರಲ್ಲಿ ಬಹುತೇಕ ಕಲಾವಿದರು ಸ್ಥಳೀಯರು. ನಿರ್ದೇಶಕ ನಟೇಶ್​ ತಂದೆ ಗೋಪಾಲ್​ ಹೆಗಡೆ ಅವರು ಪೆದ್ರೊ ಪಾತ್ರವನ್ನು ಮಾಡಿದ್ದಾರೆ. ಇವರು ಎಲ್ಲಿಯೂ ನಟನೆ ಕಲಿತವರಲ್ಲ. ಆದಾಗ್ಯೂ, ಅವರು ಉತ್ತಮವಾಗಿ ಅಭಿನಯಿಸಿದ್ದಾರೆ ಎಂಬುದು ಟ್ರೇಲರ್​ ಮೂಲಕ ಸಾಬೀತಾಗಿದೆ.

‘ಒಂದು ಮೊಟ್ಟೆಯ ಕಥೆ’, ‘ಗರುಡ ಗಮನ ವೃಷಭ ವಾಹನ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ರಾಜ್​ ಬಿ. ಶೆಟ್ಟಿ ಕೂಡ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಗ್ರಾಮೀಣ ಸೊಗಡಿನಲ್ಲಿ ಈ ಸಿನಿಮಾ ಮೂಡಿ ಬಂದಿದೆ. ‘ಒಂದು ಹಳ್ಳಿಯಲ್ಲಿರುವ ಎಲೆಕ್ಟ್ರಿಷಿಯನ್ ಅಪರಾಧ ಎಸಗುತ್ತಾನೆ. ಅಲ್ಲಿಂದ ಆತನ ಹಾಗೂ ಸಮಾಜದ ನಡುವೆ ತಿಕ್ಕಾಟ ಆರಂಭ ಆಗುತ್ತದೆ. ಇದನ್ನು ತೋರಿಸುವ ಕೆಲಸ ಸಿನಿಮಾದಲ್ಲಿ ಆಗಿದೆ. ‘ಪೆದ್ರೊ’ ಎಂಬುದು ಕ್ರಿಶ್ಚನ್​ ವ್ಯಕ್ತಿಯ ಹೆಸರು. ಪೀಟರ್​ ಹೆಸರಿನ ಅಪಭ್ರಂಶ ‘ಪೆದ್ರೊ’. ಸಿನಿಮಾ ನೋಡಿ ರಿಷಬ್​ ಶೆಟ್ಟಿ ಸಂತಸಪಟ್ಟಿದ್ದಾರೆ. ಅವರು ಸಿನಿಮಾ ನೋಡಿ ಮೆಚ್ಚಿಕೊಂಡರು. ಅವರು ಈ ಚಿತ್ರವನ್ನು ನಂಬಿ, ನಿರ್ಮಾಣ ಮಾಡಿದ್ದಾರೆ’ ಎಂದು ಮಾಹಿತಿ ನೀಡುತ್ತಾರೆ ನಿರ್ದೇಶಕ ನಟೇಶ್ ಹೆಗಡೆ.

ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ‘ಪೆದ್ರೊ’ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ರಿಷಬ್​, ‘ಪೆದ್ರೊ ಟ್ರೇಲರ್ ಬಿಡುಗಡೆಯಾಗಿದೆ. ನಮ್ಮ ಪರಿಶ್ರಮದ ಫಲ ನಿಮ್ಮ ಮುಂದೆ. ನಮ್ಮ ತಲೆಮಾರಿನ ಉತ್ಕೃಷ್ಟ ನಿರ್ದೇಶಕರಲ್ಲಿ ಒಬ್ಬರಾದ ವೆಟ್ರಿಮಾರನ್​ರವರು ನಮ್ಮ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಶೀಘ್ರವೇ ಈ ಸಿನಿಮಾ ರಿಲೀಸ್​ ಆಗಲಿದೆ’ ಎಂದು ಬರೆದುಕೊಂಡಿದ್ದಾರೆ.

 

Sneha Gowda

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

39 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago