‘ಲವ್ ಬರ್ಡ್ಸ್’ ನಲ್ಲಿ ಮಿಂಚಲಿದ್ದಾರೆ ಕೃಷ್ಣ- ಮಿಲನಾ ನಾಗರಾಜ್

ಕಡ್ಡಿಪುಡಿ ಚಂದ್ರು ನಿರ್ಮಾಣದ, ಪಿಸಿ ಶೇಖರ್ ನಿರ್ದೇಶನದ,  ಚಿತ್ರ ‘ಲವ್ ಬರ್ಡ್ಸ್​​’ನಲ್ಲಿ ರಿಯಲ್ ಲವ್​ ಬರ್ಡ್ಸ್​​ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಪಿಸಿ ಶೇಖರ್ ಕಾಂಬಿನೇಷನ್​ನಲ್ಲಿ ಚಿತ್ರವೊಂದು ಬರೋದು ಕನ್ಫರ್ಮ್ ಆಗಿತ್ತು.

ಇದೀಗ ಚಿತ್ರದ ನಾಯಕಿಯನ್ನು ಪರಿಚಯಿಸಲಾಗಿದೆ. ಕಡ್ಡಿಪುಡಿ ಚಂದ್ರು ನಿರ್ಮಾಣ ಮಾಡುತ್ತಿರುವ ಚಿತ್ರ ‘ಲವ್ ಬರ್ಡ್ಸ್​​’ನಲ್ಲಿ ರಿಯಲ್ ಲವ್​ ಬರ್ಡ್ಸ್​​ ಕೃಷ್ಣ ಹಾಗೂ ಮಿಲನಾ ನಾಗರಾಜ್ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದ್ದು, ಸಂತಸ ಹಂಚಿಕೊಂಡಿದೆ. ಚಿತ್ರ ಸದ್ಯದಲ್ಲೇ ಸೆಟ್ಟೇರಲಿದ್ದು, ಶೀಘ್ರದಲ್ಲೇ ಫಸ್ಟ್​​ ಲುಕ್ ಹಂಚಿಕೊಳ್ಳುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ‘ಲವ್​ ಮಾಕ್ಟೇಲ್ 2’ ಯಶಸ್ಸಿನ ಸಂತಸದಲ್ಲಿರುವ ಈ ಜೋಡಿ ಮತ್ತೊಂದು ಚಿತ್ರದಲ್ಲಿ ತೆರೆ ಹಂಚಿಕೊಳ್ಳುವುದು ಸಿನಿ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಮದುವೆ ಆದ ಮೇಲಿನ ಪ್ರೀತಿಯ ಕತೆಯನ್ನು ‘ಲವ್ ಬರ್ಡ್ಸ್​​’ ಒಳಗೊಂಡಿದೆ.

ಹೊಸದಾಗಿ ಮದುವೆಯಾದ ಆಧುನಿಕ ಕಾಲಘಟ್ಟದ ದಂಪತಿಯ ಕತೆಯನ್ನು ಚಿತ್ರ ಒಳಗೊಂಡಿದೆ. ಕಳೆದ ಒಂದೆರಡು ದಶಕಗಳಲ್ಲಿ ಮದುವೆಯ ಬಗೆಗಿನ ದೃಷ್ಟಿಕೋನಗಳು ಬದಲಾಗಿವೆ. ಈಗ ಮಹಿಳೆ ಪುರುಷನ ಮೇಲೆ ಅವಲಂಬಿತವಾಗಿಲ್ಲ. ಆರ್ಥಿಕವಾಗಿ ಸ್ವತಂತ್ರವಾಗಿರುವುದು ಮನೆಯಲ್ಲಿನ ಅಧಿಕಾರದ ದೃಷ್ಟಿಕೋನವನ್ನು ಬದಲಾಯಿಸಿದೆ. ಇದೆಲ್ಲವನ್ನು ಚಿತ್ರ ಒಳಗೊಂಡಿರಲಿದೆ ಎಂದಿದ್ದಾರೆ ನಿರ್ದೇಶಕ ಪಿಸಿ ಶೇಖರ್.

ಮ್ಯೂಸಿಕಲ್ ಲವ್ ಸ್ಟೋರಿಯಾಗಿರುವ ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನೀಡುತ್ತಿದ್ದಾರೆ. ಪಿಸಿ ಶೇಖರ್ ಹಾಗೂ ಅರ್ಜುನ್ ಜನ್ಯ ಒಂಬತ್ತನೇ ಬಾರಿ ಚಿತ್ರವೊಂದರಲ್ಲಿ ಜತೆಯಾಗಿ ಕೆಲಸ ಮಾಡಲಿದ್ದಾರೆ. ಚಿತ್ರದಲ್ಲಿ ರಂಗಾಯಣ ರಘು, ಸಾಧು ಕೋಕಿಲ, ವೀಣಾ ಸುಂದರ್, ಅವಿನಾಶ್ ಮೊದಲಾದ ಕಲಾವಿದರು ಬಣ್ಣಹಚ್ಚಲಿದ್ದಾರೆ. ಚಿತ್ರಕ್ಕಾಗಿ ಸೆಟ್​ಗಳ ತಯಾರಿ ನಡೆಯುತ್ತಿದ್ದು, ಅಲ್ಲಿಯೇ ಬಹುತೇಕ ಚಿತ್ರೀಕರಣ ನಡೆಯಲಿದೆ.

Ashika S

Recent Posts

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

11 seconds ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

12 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

31 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

55 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

2 hours ago