News Karnataka Kannada
Thursday, May 02 2024
ಸಾಂಡಲ್ ವುಡ್

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್

Arrest
Photo Credit :

ಬೆಂಗಳೂರು: ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವನನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿ ಕಳೆದ 2 ವರ್ಷಗಳಿಂದ ದೈಹಿಕವಾಗಿ ಬಳಸಿಕೊಳ್ಳುತ್ತಿದ್ದಾನೆ. ಇದೀಗ ಮದುವೆ ಬಗ್ಗೆ ಮಾತನಾಡಿದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ನಟಿ ದೂರು ನೀಡಿದ್ದಾರೆ.

ಸಿನಿಮಾದಲ್ಲಿ ಸಹನಟಿಯಾಗಿ ಅಭಿನಯಿಸುತ್ತಿದ್ದ ನಟಿಗೆ ಹರ್ಷವರ್ಧನ್ ಪ್ರೀತಿ-ಪ್ರೇಮದ ನಾಟಕವಾಡಿ, ನಿನ್ನನ್ನೇ ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.

ಸಂತ್ರಸ್ತ ನಟಿ ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ನಿರ್ಮಾಪಕ ಹರ್ಷವರ್ಧನ್ ನನ್ನು ಬಂಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

ಹರ್ಷವರ್ಧನ್ ವಿರುದ್ಧ ರೇಪ್ ಕೇಸ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ. ಅಲ್ಲದೇ ನಟಿಯನ್ನು ವೈದ್ಯಕೀಯ ತಪಾಸಣೆ ನಡೆಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು