ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ದಿವಂಗತ ಸಂಚಾರಿ ವಿಜಯ್ ಅವರ ಜನ್ಮದಿನ ಇಂದು. ಅವರ ಅಭಿಮಾನಿಗಳು, ಗೆಳೆಯರು ಸಾಮಾಜಿಕ ಜಾಲತಾಣಗಳ ಮುಖಾಂತರ ವಿಜಯ್ ಜೊತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ.
ಜೂನ್ 12ರ ರಾತ್ರಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಜೂನ್ 15ರಂದು ಮೃತಪಟ್ಟಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ವಿಜಯ್, ಅವರ ಏಳು ಅಂಗಾಂಗಳನ್ನು ದಾನ ಮಾಡಲಾಗಿತ್ತು. ನಟರಾದ ನೆನಪಿರಲಿ ಪ್ರೇಮ್, ಲೂಸ್ಮಾದ ಯೋಗೇಶ್ ತಮ್ಮ ಗೆಳೆಯನನ್ನು ಸ್ಮರಿಸಿದ್ದಾರೆ.
ಐದು ಭಾಷೆಯಲ್ಲಿ ತಯಾರಾಗುತ್ತಿರುವ ಸಂಚಾರಿ ವಿಜಯ್ ಅವರ ಬಹುನಿರೀಕ್ಷಿತಾ ‘ಪಿರಂಗಿಪುರ’ ಚಿತ್ರದ, ಮೊದಲ ಪಾತ್ರ ಪರಿಚಯದ ಒಂದು ವಿಡಿಯೊ ಮತ್ತು ಪೋಸ್ಟರ್ ಬಿಡುಗಡೆ ಜೊತೆ ‘ಸೈಲೆಂಟ್ ಸ್ಟಾರ್’ ಎಂಬ ಬಿರುದನ್ನು ನೀಡಲು ಚಿತ್ರತಂಡ ನಿರ್ಧರಿಸಿದೆ. ಪ್ರಿಸ್ವಿಸ್ ಸ್ಟುಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಇಂದು ಸಂಜೆ 6ಕ್ಕೆ ವಿಡಿಯೊ ಅನಾವರಣಗೊಳ್ಳಲಿದೆ.
‘ಪಿರಂಗಿಪುರ’ ಚಿತ್ರದಲ್ಲಿ ಸಂಚಾರಿ ವಿಜಯ್ ಮೂರು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಚಿತ್ರದ ಶೇ30 ಚಿತ್ರೀಕರಣ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣ ಲಾಕ್ಡೌನ್ನಿಂದಾಗಿ ಮುಂದೂಡಲ್ಪಟ್ಟಿತ್ತು. ಈ ನಡುವೆ ವಿಜಯ್ ಆಕಸ್ಮಿಕವಾಗಿ ವಿಧಿವಶರಾದರು’ ಎಂದು ನಿರ್ದೇಶಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…