ಬೆಂಗಳೂರು: ‘ಸಮುದ್ರಂ’ ಚಿತ್ರದ ಟೈಟಲ್ ನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ಗಣೇಶ ಚತುರ್ಥಿ ಶುಭ ದಿನದಂದು ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಚಿತ್ರವನ್ನು ಅನಿತಾ ಭಟ್ ಕ್ರಿಯೇಷನ್ಸ್ ಹಾಗೂ ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ನಿರ್ಮಿಸಿದ್ದಾರೆ.
ಹೆಸರೇ ಹೇಳುವಂತೆ ಇದೊಂದು ಕಡಲ ಕಿನಾರೆಯಲ್ಲಿನ ಭಾವನಾತ್ಮಕ ಕಥಾ ಹಂದರವನ್ನು ಹೊಂದಿರುವ ಚಿತ್ರವಾಗಿದೆ. ಈ ಚಿತ್ರದ ಮೂಲಕ ಪ್ರತಿಭಾನ್ವಿತ ನಟಿ ಅನಿತಾ ಭಟ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದಾರೆ. ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ನಿರ್ಮಾಣ ಮಾಡಿರುವ ಚಿತ್ರಕ್ಕೆ ಅನಿತಾ ಭಟ್ ಕ್ರಿಯೇಷನ್ಸ್, ಡಾಟ್ ಟಾಕೀಸ್ ಸಹಯೋಗವಿದೆ.
ಅನಿತಾ ಭಟ್ ಮತ್ತು ಶಿವಧ್ವಜ್ ಲೀಡ್ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಜ್ ಕಿಶೋರ್ ಹಾಗೂ ಸ್ವಾತಿ ಬಂಗೇರ ಜೋಡಿ ಕೂಡಾ ಮತ್ತೆರಡು ಪ್ರಧಾನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ರಾಘವ ಮಹರ್ಷಿ ಈ ಚಿತ್ರದ ನಿರ್ದೇಶನ ಮಾಡಿದ್ದು, ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ. ರಿಷಿಕೇಶ್ , ಛಾಯಾಗ್ರಹಣ, ಸಂಕಲನ ಮತ್ತು ಚಿತ್ರಕಥೆ, ಸಂಭಾಷಣೆಯನ್ನು ಬರೆದಿದ್ದಾರೆ.
ಸದಾ ಸವಾಲಿನ ಪಾತ್ರಗಳಿಗೆ ಹುಡುಕಾಡುವ ಅನಿತಾ ಭಟ್ ಈ ಚಿತ್ರದಲ್ಲಿ ಓರ್ವ ಗೃಹಿಣಿಯಾಗಿ ಸಂದರ್ಭಾನುಸರ ರೆಬೆಲ್ ಆಗಿ ಸಮಾಜದೆದೆರು ನಿಲ್ಲುವ ದಿಟ್ಟ ಹೆಣ್ಣಾಗಿಯೂ ಅವರು ನಟಿಸಿದ್ದಾರೆ. ಉಡುಪಿ, ಮಲ್ಪೆ, ಬ್ರಹ್ಮಾವರ, ಸಕಲೇಶಪುರ, ಮತ್ತಿತರ ಕಡೆಗಳಲ್ಲಿ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರ ಶೀಘ್ರದಲ್ಲಿಯೇ ತೆರೆ ಮೇಲೆ ಬರಲಿದೆ.
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…
ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.
ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…
ಆನ್ಲೈನ್ ಪಾರ್ಟ್ಟೈಮ್ ಕೆಲಸ ಹಾಗೂ ಆನ್ಲೈನ್ ಟ್ರೇಡಿಂಗ್ ಮೇಸೆಜ್ ನ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…
ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.
ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.