ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಆತ್ಮೀಯ ಕನ್ನಡದ ಬಂಧುಗಳೆ ಕೋವಿಡ್ ಸರ್ವ ದೇಶದ ಜನರನ್ನು ಸಂಕಷ್ಟಕ್ಕೆ ದೂಡಿತು. ಇಂಥ ಸಂಕಷ್ಟ ಸಮಯದಲ್ಲಿ ಅಲ್ಪಸ್ವಲ್ಪ ಜನರಿಗೆ ಸಂತೋಷ ನೀಡಿದ್ದು ಕಲೆ, ಅದು ಯಾವುದೆ ಭಾಷೆಯದ್ದಾಗಲಿ. ಚಿತ್ರಮಂದಿರ ಬಂದ್ ಆದರು ಸಣ್ಣ ಪರದೆಯಲ್ಲಿ ನಿಮ್ಮ ನ್ನು ರಂಜಿಸಿತು. ಅಂಥ ಕಲಾರಂಗ ಮತ್ತೆ ಚಿಗುರಿ ನಿಮ್ಮ ಮುಂದೆ ನಿಲ್ಲಬೇಕು ಎಂದರೆ ನೀವು ಹರಸಬೇಕು ಎಂದಿದ್ದಾರೆ.
ಇಂದು 100% ಚಿತ್ರಮಂದಿರ ತೆರೆದಿದೆ, ನಿಮ್ಮ ನೆಚ್ಚಿನ ನಟ-ನಟಿಯರ ಚಿತ್ರಗಳು ಇದೆ ಅಕ್ಟೋಬರನಿಂದ ತೆರೆಗೆ ಬರುತ್ತಿವೆ. ಕುಟುಂಬ ಸಮೇತ ನಿಮ್ಮ ನೆಚ್ಚಿನ ಚಿತ್ರಗಳನ್ನ ಚಿತ್ರಮಂದಿರದಲ್ಲೆ ನೋಡಿ ಆನಂದಿಸಿ. ಈ ಅಕ್ಟೋಬರ್ ಇಂದ ನನ್ನ ಆತ್ಮೀಯ ಕನ್ನಡದ ಕಲಾಬಂಧುಗಳ ಚಿತ್ರ ಬಿಡುಗಡೆಯಾಗುತ್ತಿವೆ. ನಿಮ್ಮ ಸಂತೋಷ ಚಪ್ಪಾಳೆ ಸದ್ಧಿಗೆ ಕಾಯುತ್ತಿದೆ ಕಲಾರಂಗ ಎಂದಿದ್ದಾರೆ