ಬೆಂಗಳೂರು: ಸುಳ್ಳು ಆಪಾದನೆ ಮಾಡಿರುವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸ್ಯಾಂಡಲ್ವುಡ್ ನಟ ಜಗ್ಗೇಶ್ ಟ್ವೀಟ್ ಮೂಲಕವಾಗಿ ಮಾಹಿತಿ ನೀಡಿದ್ದಾರೆ.
ಸಂಬಂಧವಿಲ್ಲದೆ ನನ್ನ ಹೆಸರು ಹಾಗೂ ಆರ್ ಅಶೋಕ್ ಅವರ ಹೆಸರು ತೆಗೆದು ರಘು ಎಂಬವರು ಅಪಮಾನಿಸಿದ್ದಾರೆ. ಇದು ನನಗೆ ಬಹಳ ನೋವುಂಟು ಮಾಡಿದೆ. ಹೀಗಾಗಿ ಸಂಬಂಧವಿಲ್ಲದೆ ನನ್ನ ಬಗ್ಗೆ ಸುಳ್ಳು ಆಪಾದನೆ ಮಾಡಿರುವ ಮಾನ್ಯ ರಘುರವರ ಮೇಲೆ ಮಾನನಷ್ಟ ಆಪಾದನೆ ದಾಖಲಿಸುತ್ತಿರುವೆ. ದಯಮಾಡಿ ಯಾರೆ ಆಗಲಿ ಸತ್ಯ ಅರಿತು ನುಡಿಯುವ ಗುಣ ಬೆಳಸಿಕೊಳ್ಳಿ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ದಲಿತ ಸಂಘರ್ಷದ ರಾಜ್ಯಾಧ್ಯಕ್ಷ ರಘು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಷ್ಟು ದಿನ ಕೇವಲ ಬಿಬಿಎಂಪಿ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗುತ್ತಿದ್ದರು. ಆದರೆ ಈ ಬಾರಿ ಪಾಲಿಕೆಯ ಭ್ರಷ್ಟಚಾರ ಸ್ಯಾಂಡಲ್ವುಡ್ಗೆ ಅಂಟಿಕೊಂಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16,167 ಮಕ್ಕಳಿಗೆ ಸ್ವೆಟರ್ ಪೂರೈಕೆ ಮಾಡುವ ಜವಾಬ್ದಾರಿಯನ್ನು ನಟ ಜಗ್ಗೇಶ್ ತಮ್ಮ ಕೋಮಲ್ ಹೊತ್ತಿದ್ದರು. ಅವರಿಗೆ 1.75 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಆರ್ ಅಶೋಕ್, ನಟ ಜಗ್ಗೇಶ್ ಅವರು ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿದ್ದರು. ಆದರೆ ಕೋವಿಡ್ ಕಾರಣದಿಂದ ಕಳೆದ ವರ್ಷ ತರಗತಿಗಳೇ ನಡೆದಿಲ್ಲ. ಸ್ವೆಟರ್ ಹಂಚಿಕೆ ಮಾಡದೆಯೇ 1.75 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸುಳ್ಳು ಆಪಾದನೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದ ಜಗ್ಗೇಶ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.