News Karnataka Kannada
Tuesday, April 30 2024
ಸಾಂಡಲ್ ವುಡ್

ಸ್ಯಾಂಡಲ್‍ವುಡ್‍ ಹಿರಿಯ ನಟ ಎಸ್.ಶಿವರಾಂ ಪಂಚಭೂತಗಳಲ್ಲಿ ಲೀನ

Shivaram Actor
Photo Credit :

ಬೆಂಗಳೂರು : ನಿನ್ನೆ ನಿಧನರಾಗಿರುವ ಸ್ಯಾಂಡಲ್‍ವುಡ್‍ನ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ಗುರುಸ್ವಾಮಿಯಾಗಿದ್ದ ಶಿವರಾಂಗೆ ಪಂಚಾಮೃತ ಅಭಿಷೇಕ ಮತ್ತು ಕೇಸರಿ ವಸ್ತ್ರ ಸಮರ್ಪಿಸಿ ಚಿತಾಗಾರಾದಲ್ಲಿ ಬ್ರಾಹ್ಮಣ ಸ್ಮಾರ್ತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು.ಶಿವರಾಂ ಪುತ್ರರಾದ ಹಿರಿಯ ಮಗ ರವಿಶಂಕರ್‌ ಮತ್ತು ಲಕ್ಷ್ಮೀಶ್ ಅಗ್ನಿ ಸ್ಪರ್ಶ ಮಾಡಿದರು. ಈ ಮೊದಲು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಶಿವರಾಂ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು

ಈ ವೇಳೆ ಅಯ್ಯಪ್ಪ ಭಕ್ತರು ಭಜನೆ ಮಾಡಿ ಅಯ್ಯಪ್ಪನಿಗೆ ಇಷ್ಟವಾದ ಕರ್ಪೂರವನ್ನು ಸಮರ್ಪಿಸಿದರು.

ಚಿತ್ರರಂಗದ ಹಲವು ಮಂದಿ ಹಿರಿಯ ನಟನ ದರ್ಶನ ಪಡೆದು ಕಂಬನಿ ಮಿಡಿದರು.ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದ ಶಿವರಾಂ ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ,ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಬ್ರೈನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.

ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬನಶಂಕರಿ ಚಿತಾಗಾರದಲ್ಲಿ ಸಕಲ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಸಚಿವ ಆರ್. ಅಶೋಕ್ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು