ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ ಮುಂದಿನ ಬಹುನಿರೀಕ್ಷಿತ ಚಿತ್ರದ ಹೆಸರು ‘ಕಾಂತಾರ’. ಅದನ್ನು ನಿರ್ದೇಶಿಸುತ್ತಿರುವವರು ಕಿರಿಕ್ ಪಾರ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಖ್ಯಾತಿಯ ನಿರ್ದೇಶಕ ರಿಷಬ್ ಶೆಟ್ಟಿ.
ನಿರ್ದೇಶನ ಮತ್ತು ನಾಯಕ ನಟನೆ ಎರಡೂ ಜವಾಬ್ದಾರಿಯನ್ನು ಹೊತ್ತಿರುವ ರಿಷಬ್ ಶೆಟ್ಟಿ ಅವರ ಜೊತೆ ಕೆಲಸ ಮಾಡುವುದು ಖುಷಿಯ ವಿಚಾರ ಎಂದು ಹೊಂಬಾಳೆ ಫಿಲ್ಮ್ಸ್ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದಾರೆ.
‘ಕಾಂತಾರ’ ಒಂದು ದಂತಕಥೆ ಎಂದು ಹೇಳಿಕೊಂಡಿರುವ ಚಿತ್ರತಂಡ ಅದರ ಫಸ್ಟ್ ಲುಕ್ ಪೋಸ್ಟರ್ ಅನ್ನು ಕೂಡ ಬಿಡುಗಡೆ ಮಾಡಿದೆ. ಕಂಬಳ ಓಟದ ಚಿತ್ರ ಪೋಸ್ಟರ್ನಲ್ಲಿದ್ದು, ಕರಾವಳಿ ಜಾನಪದ ಕ್ರೀಡೆಯ ಬಗ್ಗೆ ಚಿತ್ರ ಇರಬಹುದೇ ಎಂಬ ಕುತೂಹಲ ಮೂಡಿದೆ.
ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಬಹಳ ದಿನಗಳ ನಂತರ ಹೊಸ ಕಿಚ್ಚಿನೊಂದಿಗೆ ಮತ್ತೆ ನಿರ್ದೇಶಕನಾಗಿ ಹೊಸ ನಂಬಿಕೆಯೊಂದಿಗೆ ಕಥೆ ಹೇಳಲು ಬರುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.