ಹೊಸ ಮನೆಗೆ ಶಿಫ್ಟ್​ ಆದ ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ  ಅವರ ಜನಪ್ರಿಯತೆಯ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ಹಿಟ್​ ಆಗಿತ್ತಿವೆ.
ಕಳೆದ ವರ್ಷ ಡಿ.17ರಂದು ಬಿಡುಗಡೆಯಾದ ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಯಿತು. ವಿಶ್ವಾದ್ಯಂತ 350 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸುವಲ್ಲಿ ಆ ಚಿತ್ರ ಯಶಸ್ವಿ ಆಯಿತು. ಅದರಿಂದ ರಶ್ಮಿಕಾ ಅವರ ಡಿಮ್ಯಾಂಡ್​ ಕೂಡ ಹೆಚ್ಚಿದೆ. ಅಲ್ಲದೇ ಅವರು ಸಂಭಾವನೆ ಜಾಸ್ತಿ ಮಾಡಿಕೊಂಡಿರುವ ಬಗ್ಗೆಯೂ ವರದಿ ಆಗಿದೆ. ಈ ನಡುವೆ ಬಾಲಿವುಡ್​ ಸಿನಿಮಾಗಳ ಕಡೆಗೆ ರಶ್ಮಿಕಾ ಮಂದಣ್ಣ ಹೆಚ್ಚು ಗಮನ ನೀಡುತ್ತಿದ್ದಾರೆ.

ಹಾಗಾಗಿ ಮುಂಬೈನಲ್ಲಿ ಅವರ ವಾಸ್ತವ್ಯ ಹೆಚ್ಚಿದೆ. ಅಲ್ಲಿ ಹೊಸ ಮನೆಗೆ ಅವರು ಶಿಫ್ಟ್​ ಆಗಿದ್ದಾರೆ. ಅದರ ಬಗ್ಗೆ ಅಭಿಮಾನಿಗಳಿಗೆ ರಶ್ಮಿಕಾ ಮಾಹಿತಿ ನೀಡಿದ್ದಾರೆ. ಹೊಸ ಮನೆಗೆ  ತೆರಳಿರುವ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ. ದಿನದಿಂದ ದಿನಕ್ಕೆ ತಮ್ಮ ನೆಚ್ಚಿನ ನಟಿಯ ಬೆಳವಣಿಗೆಯನ್ನು ಕಂಡು ಫ್ಯಾನ್ಸ್​ ಖುಷಿಯಾಗುತ್ತಿದ್ದಾರೆ. ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚುವಂತಾಗಿದೆ.

ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅದು ಅವರ ಮೊದಲ ಬಾಲಿವುಡ್​ ಸಿನಿಮಾ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಚಿತ್ರದಲ್ಲಿ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹಿಂದಿ ಚಿತ್ರರಂಗದಿಂದ ಅವರಿಗೆ ಅನೇಕ ಹೊಸ ಹೊಸ ಆಫರ್​ಗಳು ಹರಿದುಬರುತ್ತಿವೆ. ಈ ಸಂದರ್ಭದಲ್ಲಿ ಅವರು ಬಾಲಿವುಡ್​ ಸಿನಿಮಾಗಳ ಕೆಲಸದ ಸಲುವಾಗಿ ಮುಂಬೈನಲ್ಲೇ ಹೆಚ್ಚು ಸಮಯ ಕಳೆಯಬೇಕಾಗುತ್ತಿದೆ. ಹಾಗಾಗಿ ಅವರು ಅಲ್ಲಿಯೇ ಮನೆ ಕೊಂಡುಕೊಂಡಿದ್ದಾರೆ.

2021ರ ಫೆಬ್ರವರಿಯಲ್ಲಿ ರಶ್ಮಿಕಾ ಮಂದಣ್ಣ ಅವರು ಮುಂಬೈನಲ್ಲಿ ಫ್ಲಾಟ್​ ಖರೀದಿಸಿದ್ದರ ಬಗ್ಗೆ ವರದಿ ಆಗಿತ್ತು. ಆದರೆ ಈಗ ಅವರು ಮತ್ತೆ ಮನೆ ಬದಲಾಯಿಸಿದ್ದಾರೆ. ಮನೆ ಬದಲಿಸುವಾಗ ವಸ್ತುಗಳನ್ನು ಸಾಗಿಸುವುದು ತುಂಬ ಕಷ್ಟದ ಕೆಲಸ ಎಂದು ಅವರು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಇನ್​​ಸ್ಟಾಗ್ರಾಮ್​ನಲ್ಲಿ ಈ ಕುರಿತು ಮಾಹಿತಿ ನೀಡಿದ್ದ ಅವರು ಚಿಕ್ಕ ವಿಡಿಯೋವನ್ನು ಹಂಚಿಕೊಂಡಿದ್ದರು. ಸ್ವತಃ ಅವರೇ ಮನೆಯ ವಸ್ತುಗಳನ್ನು ಪ್ಯಾಕಿಂಗ್​ ಮಾಡಿದ್ದಾರೆ. ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವುದು ರಶ್ಮಿಕಾಗೆ ಇಷ್ಟವಂತೆ. ಆದರೆ ವಸ್ತುಗಳನ್ನು ಶಿಫ್ಟ್ ಮಾಡುವುದು ಬಲು ಕಷ್ಟ ಎಂದು ಅವರು ಹೇಳಿದ್ದಾರೆ. ​

ಗೋವಾದಲ್ಲೂ ಇದೆ ರಶ್ಮಿಕಾ ಮಂದಣ್ಣ ಬಂಗಲೆ:

ರಶ್ಮಿಕಾ ಮಂದಣ್ಣ ಅವರು ಗೋವಾದಲ್ಲಿ ಮನೆ ಕೊಂಡುಕೊಂಡಿದ್ದರ ಬಗ್ಗೆ ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಮನೆಯ ಹೊರಾಂಗಣದ ಫೋಟೋ ಶೇರ್​ ಮಾಡಿಕೊಂಡಿದ್ದರು. ಪ್ರಕೃತಿ ಸೌಂದರ್ಯದ ನಡುವೆ ಈ ಮನೆ ಇದೆ. ಈಜುಕೊಳದ ಪಕ್ಕದಲ್ಲೇ ಬುದ್ಧನ ಮೂರ್ತಿ ಇದೆ. ಸದಾ ನೆರಳು ನೀಡಲು ಬೃಹದಾದ ಮರವಿದೆ. ಇದನ್ನೆಲ್ಲ ನೋಡಿದರೆ ಬೇರೆ ನಟಿಯರಿಗೆ ಹೊಟ್ಟೆಕಿಚ್ಚಾದರೂ ಅಚ್ಚರಿ ಏನಿಲ್ಲ. ಅದಕ್ಕೆ ರಶ್ಮಿಕಾ ನೀಡಿದ ಕ್ಯಾಪ್ಷನ್​ ಕೂಡ ಗಮನ ಸೆಳೆಯುತ್ತಿತ್ತು. ‘ಗೋವಾದಲ್ಲಿ ಹೊಸ ಮನೆ ಖರೀದಿಸಿದಾಗ.. ಹೊಟ್ಟೆಕಿಚ್ಚು ಆಯ್ತಾ?’ ಎಂದು ರಶ್ಮಿಕಾ ಪ್ರಶ್ನಿಸಿದ್ದರು.

Gayathri SG

Recent Posts

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

2 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

7 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

17 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

22 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

43 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

45 mins ago