ಬೆಂಗಳೂರು: ನಟ ಕೋಮಲ್ ಮತ್ತೊಮ್ಮೆ ಬ್ಯುಸಿಯಾಗಿದ್ದಾರೆ. ಯಲಾ ಕುನ್ನಿ ಎಂಬ ಹೊಸಚಿತ್ರದಲ್ಲಿ ಕೋಮಲ್ ನಟಿಸುತ್ತಿದ್ದಾರೆ.
ಸೌಭಾಗ್ಯ ಸಿನಿಮಾ ಲಾಂಛನದಲ್ಲಿ ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಚಿತ್ರವನ್ನುಎ ನ್. ಆರ್. ಪ್ರದೀಪ ನಿರ್ದೇಶಿಸುತ್ತಿದ್ದಾರೆ. 1981ರ ಕಾಲಘಟ್ಟದ ಕಥಾ ಹಂದರ ಹೊಂದಿರುವ ಚಿತ್ರ ಇದಾಗಿದೆ.
ಕೋಮಲ್ ರೆಟ್ರೋ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ಕಲಾವಿದ ಮುಸುರಿ ಕೃಷ್ಣ ಮೂರ್ತಿ ಅವರ ಪುತ್ರ ಜಯಸಿಂಹ ಮುಸುರಿ, ಜಗ್ಗೇಶ್ ಅವರ ಪುತ್ರ ಯತಿರಾಜ್, ಫ್ರೆಂಚ್ ಬಿರಿಯಾನಿ ಖ್ಯಾತಿಯ ಮಹಾಂತೇಶ್ ಮೊದಲಾದವರ ತಾರಗಣವಿದೆ.
ನಿರ್ದೇಶಕ ಪ್ರದೀಪ್ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.