ರಿಷಬ್ ಶೆಟ್ಟಿ ಬರ್ತ್‌ಡೇಗೆ ಸಪ್ತಮಿ ಗೌಡ ವಿಶ್

ಕಾಂತಾರ ಸಿನಿಮಾದ ಸ್ಟಾರ್ ನಟ ರಿಷಬ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಶಿವನ ಲೀಲಾ ಸಪ್ತಮಿ ಗೌಡ ಅವರು ವಿಶ್ ಮಾಡಿದ್ದಾರೆ. ಈ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

‘ನೀವು ಮತ್ತೆ ಮತ್ತೆ ಮೇಲೇರಲಿ ಮತ್ತು ಹೆಚ್ಚಿನ ಯಶಸ್ಸು ತಲುಪಲಿ, ಮತ್ತು ನಿಮ್ಮ ಶುದ್ಧ ಗ್ರಿಟ್, ದೃಢನಿರ್ಧಾರ ಮತ್ತು ಸಿನಿಮಾದ ಬಗ್ಗೆ ನಿಮ್ಮಲ್ಲಿರುವ ಉತ್ಸಾಹದಿಂದ ಎಲ್ಲಾ ರೀತಿಯ ದಾಖಲೆಗಳನ್ನು ಮಾಡಿ. ಸಂತೋಷ, ಪ್ರೀತಿ ಮತ್ತು ಶಾಂತಿಯಿಂದ ತುಂಬಿದ ಹೆಚ್ಚು ಯಶಸ್ವಿ ವರ್ಷವನ್ನು ಬಯಸುತ್ತೇವೆ ಎಂದು ಫೋಟೋಗಳ ಜೊತೆ ಸಪ್ತಮಿ ಗೌಡ ಬರೆದುಕೊಂಡಿದ್ದಾರೆ. ನಿಮ್ಮ ನಿರ್ದೇಶನದಲ್ಲಿ ನನಗೆ ಅವಕಾಶ ಸಿಕ್ಕಿದ್ದಕ್ಕಾಗಿ ನಾನು ಎಷ್ಟು ಕೃತಜ್ಞನಾಗಿದ್ದೇನೆ ಎಂದು ನಾನು ಎಷ್ಟೇ ಧನ್ಯವಾದ ಹೇಳಿದರೂ ಸಾಕಾಗುವುದಿಲ್ಲ. ಕಾಂತಾರ ಸಿನಿಮಾ ಸೆಟ್‌ನಲ್ಲಿರುವಾಗ ನನ್ನ ಕಲಿಕೆಗಾಗಿ ಸಾಥ್ ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಸಪ್ತಮಿ ಲವ್ಲಿಯಾಗಿ ಸಹನಟ ರಿಷಬ್‌ಗೆ ವಿಶ್ ತಿಳಿಸಿದ್ದಾರೆ.

ರಿಷಬ್ ನಿರ್ದೇಶನದ ಕಾಂತಾರ ಸಿನಿಮಾದಲ್ಲಿ ಶಿವ-ಲೀಲಾ ಕೆಮಿಸ್ಟ್ರಿ ಕೂಡ ಹೈಲೆಟ್ ಆಗಿತ್ತು. ಅದರಲ್ಲೂ ಸಿಂಗಾರ ಸಿರಿಯೇ ಸಾಂಗ್‌ನಲ್ಲಿ ಈ ಜೋಡಿ ಕಮಾಲ್ ಮಾಡಿತ್ತು. ಹಾಡು, ಸಿನಿಮಾ, ಶಿವ ಮತ್ತು ಲೀಲಾ ಕೆಮಿಸ್ಟ್ರಿ ಎಲ್ಲವೂ ಸೂಪರ್ ಹಿಟ್ ಆಗಿತ್ತು.

ನಟ, ನಿರ್ದೇಶಕನಾಗಿ ಸಿನಿಮಾರಂಗದಲ್ಲಿ ಸೈ ಎನಿಸಿಕೊಂಡಿರುವ ರಿಷಬ್‌ಗೆ ಇಂದು 40ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದೆ. ಕಾಂತಾರ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago